<p><strong>ಕಾರಟಗಿ:</strong> ಜಿಲ್ಲೆಯಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಶನಿವಾರದಿಂದ 2 ದಿನಗಳವರೆಗೆ ಪಟ್ಟಣದಲ್ಲಿ ನಡೆಯಲಿದೆ.</p>.<p>ಪ್ರಧಾನ ವೇದಿಕೆ ಕರ್ನಾಟಕ ಪಬ್ಲಿಕ್ ಶಾಲೆಯ ಮೈದಾನದಲ್ಲಿರುವ ಸಿದ್ದೇಶ್ವರ ರಂಗ ಮಂದಿರದ ಮುಂಭಾಗದಲ್ಲಿ ಸಿದ್ದಪಡಿಸಲಾಗಿದ್ದು, ಸ್ಫರ್ಧೆಗಳು ವಿವಿಧೆಡೆ ನಡೆಯಲಿದೆ.</p>.<p>ರಾಜ್ಯದ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಪ್ರಧಾನ ವೇದಿಕೆ ಸಿಂಗಾರಗೊಂಡಿದ್ದು, ಕಾರ್ಯಕ್ರಮದ ಯಶಸ್ಸಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಸಿಬ್ಬಂದಿ ಶ್ರಮದ ಫಲ ಸಿದ್ಧತೆ ಪೂರ್ಣಗೊಂಡಿದೆ.</p>.<p>ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಆಗಮಿಸುತ್ತಿದ್ದು ನೋಂದಣಿ ಕಾರ್ಯ ಆರಂಭಗೊಂಡಿದೆ. ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಸೋಮಶೇಖರಗೌಡ ಮಾರ್ಗದರ್ಶನದಲ್ಲಿ 18 ಉಪ ಸಮಿತಿಗಳನ್ನು ರಚಿಸಲಾಗಿದೆ.</p>.<p>ಸೋಮಶೇಖರಗೌಡ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದರು.</p>.<p>ಜಾನಪದ ನೃತ್ಯ, ಗೀತೆ, ಕವನ ವಾಚನ, ಭಾಷಣ, ಕವ್ವಾಲಿ, ಭರತನಾಟ್ಯ ಸೇರಿದಂತೆ ವೈಯಕ್ತಿಕ ಹಾಗೂ ಗುಂಪು ಸ್ಫರ್ಧೆ ಸೇರಿ 26 ಸ್ಪರ್ಧೆಗಳು ನಡೆಯಲಿವೆ. 75 ನಿರ್ಣಾಯಕರನ್ನು ನೇಮಿಸಲಾಗಿದ್ದು, ಪ್ರತಿ ಸ್ಪರ್ಧೆಯ ಮೇಲ್ವಿಚಾರಣೆ, ನಿರಂತರ ಸಂವಹನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.</p>.<p>ಊಟದ ಸ್ಥಳಗಳಿಗೆ ತೆರಳಲು ಪ್ರತ್ಯೇಕವಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಬಾಲಕಿಯರಿಗೆ 7 ಕಡೆಗೆ ಮತ್ತು ಬಾಲಕರಿಗೆ 6 ಕಡೆ ಪ್ರತ್ಯೇಕ ವಸತಿ ವ್ಯವಸ್ಥೆ ಮಾಡಲಾಗಿದೆ. ಸ್ಪರ್ಧಿಗಳಿಗೆ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ಜಿಲ್ಲೆಯಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಶನಿವಾರದಿಂದ 2 ದಿನಗಳವರೆಗೆ ಪಟ್ಟಣದಲ್ಲಿ ನಡೆಯಲಿದೆ.</p>.<p>ಪ್ರಧಾನ ವೇದಿಕೆ ಕರ್ನಾಟಕ ಪಬ್ಲಿಕ್ ಶಾಲೆಯ ಮೈದಾನದಲ್ಲಿರುವ ಸಿದ್ದೇಶ್ವರ ರಂಗ ಮಂದಿರದ ಮುಂಭಾಗದಲ್ಲಿ ಸಿದ್ದಪಡಿಸಲಾಗಿದ್ದು, ಸ್ಫರ್ಧೆಗಳು ವಿವಿಧೆಡೆ ನಡೆಯಲಿದೆ.</p>.<p>ರಾಜ್ಯದ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಅನಾವರಣಕ್ಕೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಪ್ರಧಾನ ವೇದಿಕೆ ಸಿಂಗಾರಗೊಂಡಿದ್ದು, ಕಾರ್ಯಕ್ರಮದ ಯಶಸ್ಸಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಸಿಬ್ಬಂದಿ ಶ್ರಮದ ಫಲ ಸಿದ್ಧತೆ ಪೂರ್ಣಗೊಂಡಿದೆ.</p>.<p>ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಆಗಮಿಸುತ್ತಿದ್ದು ನೋಂದಣಿ ಕಾರ್ಯ ಆರಂಭಗೊಂಡಿದೆ. ಶಿಕ್ಷಣ ಇಲಾಖೆ ಜಿಲ್ಲಾ ಉಪನಿರ್ದೇಶಕ ಸೋಮಶೇಖರಗೌಡ ಮಾರ್ಗದರ್ಶನದಲ್ಲಿ 18 ಉಪ ಸಮಿತಿಗಳನ್ನು ರಚಿಸಲಾಗಿದೆ.</p>.<p>ಸೋಮಶೇಖರಗೌಡ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಸಲಹೆ, ಸೂಚನೆಗಳನ್ನು ನೀಡಿದರು.</p>.<p>ಜಾನಪದ ನೃತ್ಯ, ಗೀತೆ, ಕವನ ವಾಚನ, ಭಾಷಣ, ಕವ್ವಾಲಿ, ಭರತನಾಟ್ಯ ಸೇರಿದಂತೆ ವೈಯಕ್ತಿಕ ಹಾಗೂ ಗುಂಪು ಸ್ಫರ್ಧೆ ಸೇರಿ 26 ಸ್ಪರ್ಧೆಗಳು ನಡೆಯಲಿವೆ. 75 ನಿರ್ಣಾಯಕರನ್ನು ನೇಮಿಸಲಾಗಿದ್ದು, ಪ್ರತಿ ಸ್ಪರ್ಧೆಯ ಮೇಲ್ವಿಚಾರಣೆ, ನಿರಂತರ ಸಂವಹನಕ್ಕಾಗಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.</p>.<p>ಊಟದ ಸ್ಥಳಗಳಿಗೆ ತೆರಳಲು ಪ್ರತ್ಯೇಕವಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಬಾಲಕಿಯರಿಗೆ 7 ಕಡೆಗೆ ಮತ್ತು ಬಾಲಕರಿಗೆ 6 ಕಡೆ ಪ್ರತ್ಯೇಕ ವಸತಿ ವ್ಯವಸ್ಥೆ ಮಾಡಲಾಗಿದೆ. ಸ್ಪರ್ಧಿಗಳಿಗೆ ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>