<p><strong>ಕೊಪ್ಪಳ:</strong> ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಮೃತಪಟ್ಟಿದ್ದಾರೆ. ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ.</p>.<p>ಚಿಕಿತ್ಸೆಗಾಗಿ ಮಲ್ಲಮ್ಮ ಕಲ್ಲೂರ್ (23) ದಾಖಲಾಗಿದ್ದರು. ಮಂಗಳವಾರ ಶಸ್ತ್ರಚಿಕಿತ್ಸೆ ವೇಳೆ ಅವರ ಸ್ಥಿತಿ ಗಂಭೀರವಾಗಿದೆ. ಕೂಡಲೇ ವೈದ್ಯ ಡಾ.ಈಶ್ವರ ಸವಡಿ ಅವರು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮಾರ್ಗಮಧ್ಯದಲ್ಲಿಯೇ ಮಲ್ಲಮ್ಮ ಕೊನೆಯುಸಿರೆಳೆದಿದ್ದಾರೆ.</p>.<p>ಮೃತರಿಗೆ ಎರಡೂವರೆ ವರ್ಷ, ಐದು ತಿಂಗಳ ಮಗು ಇದೆ. ಅರಿವಳಿಕೆ ಮದ್ದು ನೀಡದೇ ವೈದ್ಯರು ಚಿಕಿತ್ಸೆ ಮಾಡಿದ್ದೆ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. </p>.<p>ಜಿಲ್ಲಾ ಆಸ್ಪತ್ರೆಗೆ ಬಂದ ಡಿಎಚ್ಒ ಡಾ.ಲಿಂಗರಾಜು ಮತ್ತು ಶಸ್ತ್ರಚಿಕಿತ್ಸೆ ಮಾಡಿದ ಡಾ.ಈಶ್ವರ ಸವಡಿ ಅವರನ್ನು ಕುಟುಂಬಸ್ಥರು ತರಾಟೆಗೆ ತೆಗೆದುಕೊಂಡರು. </p>.<p>‘ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಡಿಎಚ್ಒ ಡಾ.ಲಿಂಗರಾಜು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಯಲಬುರ್ಗಾ ತಾಲ್ಲೂಕಿನ ಹಿರೇವಂಕಲಕುಂಟಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಮೃತಪಟ್ಟಿದ್ದಾರೆ. ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಕುಟುಂಬದವರು ಆರೋಪಿಸಿದ್ದಾರೆ.</p>.<p>ಚಿಕಿತ್ಸೆಗಾಗಿ ಮಲ್ಲಮ್ಮ ಕಲ್ಲೂರ್ (23) ದಾಖಲಾಗಿದ್ದರು. ಮಂಗಳವಾರ ಶಸ್ತ್ರಚಿಕಿತ್ಸೆ ವೇಳೆ ಅವರ ಸ್ಥಿತಿ ಗಂಭೀರವಾಗಿದೆ. ಕೂಡಲೇ ವೈದ್ಯ ಡಾ.ಈಶ್ವರ ಸವಡಿ ಅವರು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ಮಾರ್ಗಮಧ್ಯದಲ್ಲಿಯೇ ಮಲ್ಲಮ್ಮ ಕೊನೆಯುಸಿರೆಳೆದಿದ್ದಾರೆ.</p>.<p>ಮೃತರಿಗೆ ಎರಡೂವರೆ ವರ್ಷ, ಐದು ತಿಂಗಳ ಮಗು ಇದೆ. ಅರಿವಳಿಕೆ ಮದ್ದು ನೀಡದೇ ವೈದ್ಯರು ಚಿಕಿತ್ಸೆ ಮಾಡಿದ್ದೆ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. </p>.<p>ಜಿಲ್ಲಾ ಆಸ್ಪತ್ರೆಗೆ ಬಂದ ಡಿಎಚ್ಒ ಡಾ.ಲಿಂಗರಾಜು ಮತ್ತು ಶಸ್ತ್ರಚಿಕಿತ್ಸೆ ಮಾಡಿದ ಡಾ.ಈಶ್ವರ ಸವಡಿ ಅವರನ್ನು ಕುಟುಂಬಸ್ಥರು ತರಾಟೆಗೆ ತೆಗೆದುಕೊಂಡರು. </p>.<p>‘ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಡಿಎಚ್ಒ ಡಾ.ಲಿಂಗರಾಜು ಪ್ರತಿಕ್ರಿಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>