ಕುಕನೂರು: ತಾಲ್ಲೂಕಿನ ಕುದುರಿಮೋತಿ ಗ್ರಾಮದ ಲಾಡಿನ್ ಸಾಬ್ ಮಾಬುಸಾಬ್ ಮಕಾಂದಾರ್ (28) ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಶನಿವಾರ ಸಂಜೆ ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ತೆರಳಿ ಮೃತ ಲಾಡಿನ್ ಸಾಬ್ ಸಂಬಂಧಿಕರಿಗೆ ಸಮಾಧಾನ ಪಡಿಸಿದರು. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ₹ 5 ಲಕ್ಷ ಚೆಕ್ ವಿತರಿಸಿದರು.
ತಹಶೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ್, ಹೇಮಂತರಾಜ್ ಮತ್ತು ಪಿಎಸ್ಐ ವೆಂಕಟೇಶ್ ಇದ್ದರು.