<p><strong>ಕಾರಟಗಿ:</strong> ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ನಿರ್ಮಿಸಿರುವ ಆಟೊ ನಿಲ್ದಾಣದಲ್ಲಿ ಆಟೊ ನಿಲುಗಡೆ ವಿಷಯವಾಗಿ ಚಾಲಕರ ಹಾಗೂ ಬೀದಿ ಬದಿಯ ತಳ್ಳುವ ಬಂಡಿಗಳ ವ್ಯಾಪಾರಸ್ಥರ ನಡುವೆ ನಡೆದಿದ್ದ ಜಟಾಪಟಿಗೆ ಮಂಗಳವಾರ ತಾತ್ಕಾಲಿಕ ತೆರೆ ಬಿದ್ದಿದೆ.</p>.<p>ಪುರಸಭೆಯಿಂದ ₹4 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದ ನಿಲ್ದಾಣದಲ್ಲಿ ಆಟೊಗಳ ನಿಲುಗಡೆಗೆ ಬೀದಿ ಬದಿಯ ಗೂಡಂಗಡಿಗಳಿಂದ ಸಮಸ್ಯೆಯಾಗಿತ್ತು.</p>.<p>ಪುರಸಭೆ ಕಚೇರಿಯಲ್ಲಿ ಅಧ್ಯಕ್ಷೆ ರೇಖಾ ಆನೆಹೊಸೂರು, ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ್ ನೇತೃತ್ವದಲ್ಲಿ ಆಟೊ ಚಾಲಕರು, ಬೀದಿ ಬದಿಯ ವ್ಯಾಪಾರಸ್ಥರು, ಸ್ಥಳೀಯ ಜಾಗೃತ ಯುವಕ ಸಂಘ ಹಾಗೂ ದಲಿತ ವಿಮೋಚನಾ ಸೇನೆಯ ಪದಾಧಿಕಾರಿಗಳು ಚರ್ಚಿಸಿ ಸಮಸ್ಯೆಗೆ ಪರಿಹಾರ ದೊರಕಿಸಿ ಸಮಸ್ಯೆಗೆ ತೆರೆ ಎಳೆದಿದ್ದಾರೆ. </p>.<p>ಆಟೊ ಚಾಲಕರ ಸಂಘದ ಅಧ್ಯಕ್ಷ ಹನುಮಂತ, ‘ಗ್ಯಾಸ್ ಅವಲಂಬಿತ ಆಟೊಗಳಿದ್ದು ತಳ್ಳುವ ಬಂಡಿಗಳ ವ್ಯಾಪಾರಿಗಳು ಸದಾ ಒಲೆ ಉರಿಸುವುದರಿಂದ ಅಪಾಯದ ಸಾಧ್ಯತೆ ಇದೆ. ಆಟೊ ನಿಲುಗಡೆಗೆ ಸಮಸ್ಯೆಯಾಗುತ್ತಿದೆ’ ಎಂದರು.</p>.<p>ಎಗ್ರೈಸ್, ಇಡ್ಲಿ ಬಂಡಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆಯನ್ನು ಬಸ್ ನಿಲ್ದಾಣದ ಇತರೆ ಜಾಗೆಯಲ್ಲಿ ಮಾಡಬೇಕು ಎಂದು ಜಾಗೃತ ಯುವಕ ಸಂಘದ ಅಧ್ಯಕ್ಷ ಬಸವರಾಜ ಶೆಟ್ಟರ ಹಾಗೂ ದಲಿತ ವಿಮೋಚನಾ ಸೇನೆಯ ಜಮದಗ್ನಿ ಸಲಹೆ ನೀಡಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ್ ಪ್ರತಿಕ್ರಿಯಿಸಿ, ‘ಒಂದೆರಡು ತಿಂಗಳಲ್ಲಿ ರಸ್ತೆ ವಿಸ್ತರಣೆ ನಡೆಯಲಿದ್ದು ಎಲ್ಲರನ್ನೂ ತೆರವುಗೊಳಿಸಬೇಕಾಗುತ್ತದೆ. ಹೀಗಾಗಿ ಹೊಂದಾಣಿಕೆ ಮಾಡಿಕೊಂಡು ಸೂಕ್ತ ಸ್ಥಳ ಹುಡುಕಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಪುರಸಭೆ ಉಪಾಧ್ಯಕ್ಷೆ ದೇವಮ್ಮ ಗಂಗಪ್ಪ, ಸದಸ್ಯರಾದ ರಾಜಶೇಖರ ಸಿರಿಗೇರಿ, ಹಿರೇಬಸಪ್ಪ ಸಜ್ಜನ, ವೀರೇಶ ಮುದಗಲ, ಜಾಗೃತ ಯುವಕ ಸಂಘದ ಮಾಜಿ ಅಧ್ಯಕ್ಷರಾದ ಪ್ರಹ್ಲಾದ್ ಜೋಷಿ, ಎಂ. ಸಂದೀಪ್ಗೌಡ, ಉಪಾಧ್ಯಕ್ಷ ಅಯ್ಯಪ್ಪ ಉಪ್ಪಾರ ಸಹಿತ ಅನೇಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ಪಟ್ಟಣದ ಬಸ್ ನಿಲ್ದಾಣದ ಮುಂಭಾಗದಲ್ಲಿ ನಿರ್ಮಿಸಿರುವ ಆಟೊ ನಿಲ್ದಾಣದಲ್ಲಿ ಆಟೊ ನಿಲುಗಡೆ ವಿಷಯವಾಗಿ ಚಾಲಕರ ಹಾಗೂ ಬೀದಿ ಬದಿಯ ತಳ್ಳುವ ಬಂಡಿಗಳ ವ್ಯಾಪಾರಸ್ಥರ ನಡುವೆ ನಡೆದಿದ್ದ ಜಟಾಪಟಿಗೆ ಮಂಗಳವಾರ ತಾತ್ಕಾಲಿಕ ತೆರೆ ಬಿದ್ದಿದೆ.</p>.<p>ಪುರಸಭೆಯಿಂದ ₹4 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ್ದ ನಿಲ್ದಾಣದಲ್ಲಿ ಆಟೊಗಳ ನಿಲುಗಡೆಗೆ ಬೀದಿ ಬದಿಯ ಗೂಡಂಗಡಿಗಳಿಂದ ಸಮಸ್ಯೆಯಾಗಿತ್ತು.</p>.<p>ಪುರಸಭೆ ಕಚೇರಿಯಲ್ಲಿ ಅಧ್ಯಕ್ಷೆ ರೇಖಾ ಆನೆಹೊಸೂರು, ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ್ ನೇತೃತ್ವದಲ್ಲಿ ಆಟೊ ಚಾಲಕರು, ಬೀದಿ ಬದಿಯ ವ್ಯಾಪಾರಸ್ಥರು, ಸ್ಥಳೀಯ ಜಾಗೃತ ಯುವಕ ಸಂಘ ಹಾಗೂ ದಲಿತ ವಿಮೋಚನಾ ಸೇನೆಯ ಪದಾಧಿಕಾರಿಗಳು ಚರ್ಚಿಸಿ ಸಮಸ್ಯೆಗೆ ಪರಿಹಾರ ದೊರಕಿಸಿ ಸಮಸ್ಯೆಗೆ ತೆರೆ ಎಳೆದಿದ್ದಾರೆ. </p>.<p>ಆಟೊ ಚಾಲಕರ ಸಂಘದ ಅಧ್ಯಕ್ಷ ಹನುಮಂತ, ‘ಗ್ಯಾಸ್ ಅವಲಂಬಿತ ಆಟೊಗಳಿದ್ದು ತಳ್ಳುವ ಬಂಡಿಗಳ ವ್ಯಾಪಾರಿಗಳು ಸದಾ ಒಲೆ ಉರಿಸುವುದರಿಂದ ಅಪಾಯದ ಸಾಧ್ಯತೆ ಇದೆ. ಆಟೊ ನಿಲುಗಡೆಗೆ ಸಮಸ್ಯೆಯಾಗುತ್ತಿದೆ’ ಎಂದರು.</p>.<p>ಎಗ್ರೈಸ್, ಇಡ್ಲಿ ಬಂಡಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆಯನ್ನು ಬಸ್ ನಿಲ್ದಾಣದ ಇತರೆ ಜಾಗೆಯಲ್ಲಿ ಮಾಡಬೇಕು ಎಂದು ಜಾಗೃತ ಯುವಕ ಸಂಘದ ಅಧ್ಯಕ್ಷ ಬಸವರಾಜ ಶೆಟ್ಟರ ಹಾಗೂ ದಲಿತ ವಿಮೋಚನಾ ಸೇನೆಯ ಜಮದಗ್ನಿ ಸಲಹೆ ನೀಡಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಕಾರ್ ಪ್ರತಿಕ್ರಿಯಿಸಿ, ‘ಒಂದೆರಡು ತಿಂಗಳಲ್ಲಿ ರಸ್ತೆ ವಿಸ್ತರಣೆ ನಡೆಯಲಿದ್ದು ಎಲ್ಲರನ್ನೂ ತೆರವುಗೊಳಿಸಬೇಕಾಗುತ್ತದೆ. ಹೀಗಾಗಿ ಹೊಂದಾಣಿಕೆ ಮಾಡಿಕೊಂಡು ಸೂಕ್ತ ಸ್ಥಳ ಹುಡುಕಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಪುರಸಭೆ ಉಪಾಧ್ಯಕ್ಷೆ ದೇವಮ್ಮ ಗಂಗಪ್ಪ, ಸದಸ್ಯರಾದ ರಾಜಶೇಖರ ಸಿರಿಗೇರಿ, ಹಿರೇಬಸಪ್ಪ ಸಜ್ಜನ, ವೀರೇಶ ಮುದಗಲ, ಜಾಗೃತ ಯುವಕ ಸಂಘದ ಮಾಜಿ ಅಧ್ಯಕ್ಷರಾದ ಪ್ರಹ್ಲಾದ್ ಜೋಷಿ, ಎಂ. ಸಂದೀಪ್ಗೌಡ, ಉಪಾಧ್ಯಕ್ಷ ಅಯ್ಯಪ್ಪ ಉಪ್ಪಾರ ಸಹಿತ ಅನೇಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>