<p><strong>ಕನಕಗಿರಿ: ಜಿ</strong>ಲ್ಲಾಡಳಿತ ಜಾರಿ ಮಾಡಿರುವ ಸಂಪೂರ್ಣ ಲಾಕ್ಡೌನ್ಗೆ ಸೋಮವಾರ ಇಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಯಿತು.</p>.<p>ಬೆಳಗಿನ ಜಾವದಿಂದಲೇ ಪೊಲೀಸರು ಪಟ್ಟಣದಲ್ಲಿ ಮಿಂಚಿನ ಸಂಚಾರ ನಡೆಸಿ ಸಂಪೂರ್ಣ ಲಾಕ್ಡೌನ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.</p>.<p>ರಾಜಬೀದಿ, ಮಹರ್ಷಿ ವಾಲ್ಮೀಕಿ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಮೋಚಿ, ಭೋವಿ ಕಾಲೊನಿ, ಇಂದಿರಾನಗರ ಸೇರಿದಂತೆ ಪ್ರತಿಯೊಂದು ವಾರ್ಡ್ಗಳಲ್ಲಿ ಪೊಲೀಸರು ಸಂಚರಿಸಿ, ಲಾಕ್ಡೌನ್ ಕುರಿತು ತಿಳಿವಳಿಕೆ ಮೂಡಿಸಿದರು.</p>.<p>ವಾಹನಗಳನ್ನು ವಶಕ್ಕೆ ಪಡೆದುಕೊಂಡು ತಪಾಸಣೆ ನಡೆಸಿದರು. ಕಿರಾಣಿ ಅಂಗಡಿ, ಹೋಟೆಲ್, ಖಾನಾವಳಿ ಇತರೆ ಅಂಗಡಿ ಮುಂಗಟ್ಟುಗಳನ್ನು ವರ್ತಕರು ಸಂಪೂರ್ಣ ಬಂದ್ ಮಾಡಿಕೊಂಡು ಲಾಕ್ಡೌನ್ಗೆ ಸ್ಪಂದಿಸಿದರು. ಬ್ಯಾಂಕ್ ಸೇರಿದಂತೆ ಸರ್ಕಾರಿ, ಕಚೇರಿಗಳು ಸಹ ಬಂದ್ ಆಗಿದ್ದವು.</p>.<p>ತಹಶೀಲ್ದಾರ್ ರವಿ ಅಂಗಡಿ, ಪಿಎಸ್ಐಗಳಾದ ತಾರಾಬಾಯಿ ಪವಾರ , ಕಾಶೀಂಸಾಬ ಮಾತನಾಡಿ, ಜನರು ಅಗತ್ಯ ಸಮಯದಲ್ಲಿ ಮಾತ್ರ ಮನೆಯಿಂದ ಹೊರಗಡೆ ಬರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಬೇಕೆಂದು ಹೇಳಿದರು.</p>.<p>ವಾಹನಗಳ ಓಡಾಟಕ್ಕೆ ಅವಕಾಶ ನೀಡುವುದಿಲ್ಲ. ಗೊಬ್ಬರ ಖರೀದಿ, ಔಷಧಿ, ಚಿಕಿತ್ಸೆಗೆ ಬರುವವರು ಕಡ್ಡಾಯವಾಗಿ ರಶೀದಿಗಳನ್ನು ತೋರಿಸಬೇಕೆಂದು ತಾಕೀತು ಮಾಡಿದರು.</p>.<p>ಸಹಾಯಕ ಸಬ್ಇನ್ಸ್ಪೆಕ್ಟರ್ ಜಾಫರುದ್ದೀನ್, ಮಂಜುನಾಥ ಹುಲ್ಲೂರು, ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಪೊಲೀಸರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ: ಜಿ</strong>ಲ್ಲಾಡಳಿತ ಜಾರಿ ಮಾಡಿರುವ ಸಂಪೂರ್ಣ ಲಾಕ್ಡೌನ್ಗೆ ಸೋಮವಾರ ಇಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಯಿತು.</p>.<p>ಬೆಳಗಿನ ಜಾವದಿಂದಲೇ ಪೊಲೀಸರು ಪಟ್ಟಣದಲ್ಲಿ ಮಿಂಚಿನ ಸಂಚಾರ ನಡೆಸಿ ಸಂಪೂರ್ಣ ಲಾಕ್ಡೌನ್ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.</p>.<p>ರಾಜಬೀದಿ, ಮಹರ್ಷಿ ವಾಲ್ಮೀಕಿ, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ, ಮೋಚಿ, ಭೋವಿ ಕಾಲೊನಿ, ಇಂದಿರಾನಗರ ಸೇರಿದಂತೆ ಪ್ರತಿಯೊಂದು ವಾರ್ಡ್ಗಳಲ್ಲಿ ಪೊಲೀಸರು ಸಂಚರಿಸಿ, ಲಾಕ್ಡೌನ್ ಕುರಿತು ತಿಳಿವಳಿಕೆ ಮೂಡಿಸಿದರು.</p>.<p>ವಾಹನಗಳನ್ನು ವಶಕ್ಕೆ ಪಡೆದುಕೊಂಡು ತಪಾಸಣೆ ನಡೆಸಿದರು. ಕಿರಾಣಿ ಅಂಗಡಿ, ಹೋಟೆಲ್, ಖಾನಾವಳಿ ಇತರೆ ಅಂಗಡಿ ಮುಂಗಟ್ಟುಗಳನ್ನು ವರ್ತಕರು ಸಂಪೂರ್ಣ ಬಂದ್ ಮಾಡಿಕೊಂಡು ಲಾಕ್ಡೌನ್ಗೆ ಸ್ಪಂದಿಸಿದರು. ಬ್ಯಾಂಕ್ ಸೇರಿದಂತೆ ಸರ್ಕಾರಿ, ಕಚೇರಿಗಳು ಸಹ ಬಂದ್ ಆಗಿದ್ದವು.</p>.<p>ತಹಶೀಲ್ದಾರ್ ರವಿ ಅಂಗಡಿ, ಪಿಎಸ್ಐಗಳಾದ ತಾರಾಬಾಯಿ ಪವಾರ , ಕಾಶೀಂಸಾಬ ಮಾತನಾಡಿ, ಜನರು ಅಗತ್ಯ ಸಮಯದಲ್ಲಿ ಮಾತ್ರ ಮನೆಯಿಂದ ಹೊರಗಡೆ ಬರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಬೇಕೆಂದು ಹೇಳಿದರು.</p>.<p>ವಾಹನಗಳ ಓಡಾಟಕ್ಕೆ ಅವಕಾಶ ನೀಡುವುದಿಲ್ಲ. ಗೊಬ್ಬರ ಖರೀದಿ, ಔಷಧಿ, ಚಿಕಿತ್ಸೆಗೆ ಬರುವವರು ಕಡ್ಡಾಯವಾಗಿ ರಶೀದಿಗಳನ್ನು ತೋರಿಸಬೇಕೆಂದು ತಾಕೀತು ಮಾಡಿದರು.</p>.<p>ಸಹಾಯಕ ಸಬ್ಇನ್ಸ್ಪೆಕ್ಟರ್ ಜಾಫರುದ್ದೀನ್, ಮಂಜುನಾಥ ಹುಲ್ಲೂರು, ಪಟ್ಟಣ ಪಂಚಾಯಿತಿ ಸಿಬ್ಬಂದಿ ಹಾಗೂ ಪೊಲೀಸರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>