ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತಮ ಸೇವೆ ನೀಡಲು ಶ್ರಮಿಸಿ: ಸುಂದರೇಶಬಾಬು

Last Updated 15 ಆಗಸ್ಟ್ 2022, 17:03 IST
ಅಕ್ಷರ ಗಾತ್ರ

ಕೊಪ್ಪಳ: ‘ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸಿ’ ಎಂದು ಜಿಲ್ಲಾಧಿಕಾರಿ ಎಂ. ಸುಂದರೇಶ ಬಾಬು ನೌಕರರಿಗೆ ಸಲಹೆ ನೀಡಿದರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ‘ದೇಶದ ಸ್ವಾತಂತ್ರ್ಯಕ್ಕಾಗಿ ಹಲವಾರು ಮಹನೀಯರು ಪ್ರಾಣ ಬಲಿದಾನ ಮಾಡಿದ್ದಾರೆ. ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಲಾಗಿದ್ದ ಹರ್‌ ಘರ್‌ ತಿರಂಗಾ ಅಭಿಯಾನಕ್ಕೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಲಭಿಸಿದೆ. ಕೋವಿಡ್‌ ಸಂದರ್ಭದಲ್ಲಿಯೂ ಎಲ್ಲರೂ ಉತ್ತಮವಾಗಿ ಕೆಲಸ ಮಾಡಿದ್ದೀರಿ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸಸ್ಯ ಸಂತೆಗೆ ಚಾಲನೆ: ಸಚಿವೆ ಶಶಿಕಲಾ ಜೊಲ್ಲೆ ನಗರದ ತೋಟಗಾರಿಕಾ ಕಚೇರಿಯ ಆವರಣದಲ್ಲಿ ಆಯೋಜನೆಯಾಗಿರುವ ಸಸ್ಯ ಸಂತೆ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಚಾಲನೆ ನೀಡಿದರು. ಈ ಮೇಳ ಐದು ದಿನ ಜರುಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT