<p><strong>ಕನಕಗಿರಿ</strong>: ‘ಸರ್ಕಾರಿ ಆಸ್ತಿ ಸಂರಕ್ಷಣೆಗೆ ಶಾಲೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸಹಕಾರ ನೀಡಲಾಗುವುದು’ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ರಮೇಶ ನಾಯಕ ಹುಲಿಹೈದರ ತಿಳಿಸಿದರು.</p>.<p>ತಾಲ್ಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಸಮಾಜ ಹಾಗೂ ದೇಶಕ್ಕೆ ಕೀರ್ತಿ ತರುವ ಕೆಲಸ ಮಾಡಬೇಕು. ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಹವ್ಯಾಸಗಳನ್ನು ಬೆಳಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಗದೀಶಪ್ಪ ಗದ್ದಿ ಮಾತನಾಡಿ,‘ಪ್ರತಿಯೊಬ್ಬರು ಶಿಕ್ಷಣದ ಮಹತ್ವ ಅರಿತುಕೊಂಡು ಅಧ್ಯಯನ ಮಾಡಬೇಕು ಎಂದರು.</p>.<p>ಮುಖ್ಯಶಿಕ್ಷಕ ಬಾಲಾಜಿ ಸೂಳೇಕಲ್, ಕೆಡಿಪಿ ಮಾಜಿ ಸದಸ್ಯ ಗುರುನಗೌಡ ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಥ್ರೋ ಬಾಲ್ ಆಟಗಾರರಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ರಾಜಾ ಅಮರ ನಾಯಕ, ಗ್ರಾಮ ಪಂಚಾಯಿತಿಯ ಸದಸ್ಯರಾದ ಶಿವಪುತ್ರಪ್ಪ, ಸಾವಿತ್ರಮ್ಮ ದುರ್ಗಪ್ಪ , ಗ್ರಾಮದ ಮುಖಂಡರಾದ ಗೋಸ್ಲೆಪ್ಪ ಗದ್ದಿ, ಹನುಮೇಶ ನಾಮಸೇವೆ, ಕಂಠೆಪ್ಪ ಸಿರವಾರ, ಕನಕಪ್ಪ ಪೂಜಾರ, ದುರುಗಪ್ಪ ಹರಿಜನ, ಕರ್ನಾಟಕ ರಾಜ್ಯ ನೌಕರರ ಸಂಘದ ನಿರ್ದೇಶಕ ಶಾಮಮೂರ್ತಿ ಹಾಗೂ ಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ</strong>: ‘ಸರ್ಕಾರಿ ಆಸ್ತಿ ಸಂರಕ್ಷಣೆಗೆ ಶಾಲೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಸಹಕಾರ ನೀಡಲಾಗುವುದು’ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ರಮೇಶ ನಾಯಕ ಹುಲಿಹೈದರ ತಿಳಿಸಿದರು.</p>.<p>ತಾಲ್ಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಶಿಕ್ಷಕರ ದಿನಾಚರಣೆ ಹಾಗೂ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಸಮಾಜ ಹಾಗೂ ದೇಶಕ್ಕೆ ಕೀರ್ತಿ ತರುವ ಕೆಲಸ ಮಾಡಬೇಕು. ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಹವ್ಯಾಸಗಳನ್ನು ಬೆಳಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಜಗದೀಶಪ್ಪ ಗದ್ದಿ ಮಾತನಾಡಿ,‘ಪ್ರತಿಯೊಬ್ಬರು ಶಿಕ್ಷಣದ ಮಹತ್ವ ಅರಿತುಕೊಂಡು ಅಧ್ಯಯನ ಮಾಡಬೇಕು ಎಂದರು.</p>.<p>ಮುಖ್ಯಶಿಕ್ಷಕ ಬಾಲಾಜಿ ಸೂಳೇಕಲ್, ಕೆಡಿಪಿ ಮಾಜಿ ಸದಸ್ಯ ಗುರುನಗೌಡ ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ ಥ್ರೋ ಬಾಲ್ ಆಟಗಾರರಿಗೆ ಪ್ರಶಸ್ತಿ ಹಾಗೂ ಪ್ರಮಾಣ ಪತ್ರ ನೀಡಿ ಅಭಿನಂದಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ರಾಜಾ ಅಮರ ನಾಯಕ, ಗ್ರಾಮ ಪಂಚಾಯಿತಿಯ ಸದಸ್ಯರಾದ ಶಿವಪುತ್ರಪ್ಪ, ಸಾವಿತ್ರಮ್ಮ ದುರ್ಗಪ್ಪ , ಗ್ರಾಮದ ಮುಖಂಡರಾದ ಗೋಸ್ಲೆಪ್ಪ ಗದ್ದಿ, ಹನುಮೇಶ ನಾಮಸೇವೆ, ಕಂಠೆಪ್ಪ ಸಿರವಾರ, ಕನಕಪ್ಪ ಪೂಜಾರ, ದುರುಗಪ್ಪ ಹರಿಜನ, ಕರ್ನಾಟಕ ರಾಜ್ಯ ನೌಕರರ ಸಂಘದ ನಿರ್ದೇಶಕ ಶಾಮಮೂರ್ತಿ ಹಾಗೂ ಶಿಕ್ಷಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>