ಹನುಮಸಾಗರ: ‘ಸರ್ಕಾರ ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗಾಗಿ ಬಿಸಿಯೂಟ ಸೇರಿದಂತೆ ಪಠ್ಯಪುಸ್ತಕ, ಸಮವಸ್ತ್ರ, ಶಿಷ್ಯವೇತನ, ಬೈಸಿಕಲ್ ನೀಡುತ್ತಿದೆ. ಈ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳುವುದರ ಜತೆಗೆ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಬೇಕು’ ಎಂದು ಶಾಲಾ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಶಿವಪ್ಪ ಕಂಪ್ಲಿ ಹೇಳಿದರು.