<p><strong>ಗಂಗಾವತಿ</strong>: ಮೊಬೈಲ್ ಬಳಕೆ ಕಡಿಮೆ ಮಾಡಿ, ಓದಿನ ಕಡೆ ಹೆಚ್ಚಿನ ಗಮನ ನೀಡುವಂತೆ ತಂದೆ-ತಾಯಿ ಬುದ್ದಿವಾದ ಹೇಳಿದಕ್ಕೆ ಮನನೊಂದು ಯುವಕನೊಬ್ಬ ಗಂಗಾವತಿ ತಾಲ್ಲೂಕಿನ ಸಾಣಾಪುರ ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ.</p>.<p>ಗಂಗಾವತಿ ಜಯನಗರದ ಸಿದ್ದಾಪುರ ಬಡಾವಣೆ ನಿವಾಸಿ ರಾಹುಲ್ ನಾಗೇಶ ಟೆಂಗಿನಕಾಯಿ (18) ಆತ್ಮಹತ್ಯೆ ಮಾಡಿಕೊಂಡ ಯುವಕ.</p>.<p>ಯುವಕ ರಾಹುಲ್ ಬೇಥಲ್ ಕಾಲೇಜಿನಲ್ಲಿ ದ್ವಿತೀಯ ಪಿಯು ಓದುತ್ತಿದ್ದ. ಪಾಲಕರು ಮೊಬೈಲ್ ಬಳಕೆ ಬಿಟ್ಟು ಶಿಕ್ಷಣದ ಕಡೆ ಗಮನಹರಿಸುವಂತೆ ಬುದ್ಧಿವಾದ ಹೇಳಿದ್ದರು.</p>.<p>ಈ ವಿಷಯಕ್ಕೆ ರಾಹುಲ್ ಮೂರು ದಿನಗಳ ಹಿಂದೆಯೇ ಮನೆ ತೊರೆದಿದ್ದ. ಗಾಬರಿಗೊಂಡ ಪಾಲಕರು ಗಂಗಾವತಿ ನಗರಠಾಣೆಯಲ್ಲಿ ಜೂ.11ರಂದು ಪತ್ತೆಗಾಗಿ ದೂರು ಸಲ್ಲಿಸಿದ್ದರು.</p>.<p>ಬುಧವಾರ ಬೆಳಿಗ್ಗೆ ಸಾಣಾಪುರ ಕೆರೆಯಲ್ಲಿ ರಾಹುಲ್ ಮೃತದೇಹ ಪತ್ತೆಯಾಗಿದೆ. ಹರಿಗೋಲು ಸವಾರರ ಸಹಾಯದಿಂದ ಮೃತದೇಹ ಹೊರತಂದು, ಮುಂದಿನ ಪ್ರಕ್ರಿಯೆಗೆ ಗಂಗಾವತಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ಮೊಬೈಲ್ ಬಳಕೆ ಕಡಿಮೆ ಮಾಡಿ, ಓದಿನ ಕಡೆ ಹೆಚ್ಚಿನ ಗಮನ ನೀಡುವಂತೆ ತಂದೆ-ತಾಯಿ ಬುದ್ದಿವಾದ ಹೇಳಿದಕ್ಕೆ ಮನನೊಂದು ಯುವಕನೊಬ್ಬ ಗಂಗಾವತಿ ತಾಲ್ಲೂಕಿನ ಸಾಣಾಪುರ ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಬೆಳಕಿಗೆ ಬಂದಿದೆ.</p>.<p>ಗಂಗಾವತಿ ಜಯನಗರದ ಸಿದ್ದಾಪುರ ಬಡಾವಣೆ ನಿವಾಸಿ ರಾಹುಲ್ ನಾಗೇಶ ಟೆಂಗಿನಕಾಯಿ (18) ಆತ್ಮಹತ್ಯೆ ಮಾಡಿಕೊಂಡ ಯುವಕ.</p>.<p>ಯುವಕ ರಾಹುಲ್ ಬೇಥಲ್ ಕಾಲೇಜಿನಲ್ಲಿ ದ್ವಿತೀಯ ಪಿಯು ಓದುತ್ತಿದ್ದ. ಪಾಲಕರು ಮೊಬೈಲ್ ಬಳಕೆ ಬಿಟ್ಟು ಶಿಕ್ಷಣದ ಕಡೆ ಗಮನಹರಿಸುವಂತೆ ಬುದ್ಧಿವಾದ ಹೇಳಿದ್ದರು.</p>.<p>ಈ ವಿಷಯಕ್ಕೆ ರಾಹುಲ್ ಮೂರು ದಿನಗಳ ಹಿಂದೆಯೇ ಮನೆ ತೊರೆದಿದ್ದ. ಗಾಬರಿಗೊಂಡ ಪಾಲಕರು ಗಂಗಾವತಿ ನಗರಠಾಣೆಯಲ್ಲಿ ಜೂ.11ರಂದು ಪತ್ತೆಗಾಗಿ ದೂರು ಸಲ್ಲಿಸಿದ್ದರು.</p>.<p>ಬುಧವಾರ ಬೆಳಿಗ್ಗೆ ಸಾಣಾಪುರ ಕೆರೆಯಲ್ಲಿ ರಾಹುಲ್ ಮೃತದೇಹ ಪತ್ತೆಯಾಗಿದೆ. ಹರಿಗೋಲು ಸವಾರರ ಸಹಾಯದಿಂದ ಮೃತದೇಹ ಹೊರತಂದು, ಮುಂದಿನ ಪ್ರಕ್ರಿಯೆಗೆ ಗಂಗಾವತಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>