ಶಾಖೆಯ 44ನೇ ವಾರ್ಷಿಕೋತ್ಸವದ ನಿಮಿತ್ತ ಗುರುವಾರ ಇಲ್ಲಿ ಏರ್ಪಡಿಸಲಾಗಿದ್ದ ಗ್ರಾಹಕರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಗ್ರಾಹಕರ ಸಹಕಾರ, ಸಿಬ್ಬಂದಿಯ ಸಮರ್ಪಣಾ ಮನೋಭಾವದ ಸೇವೆಯಿಂದ ಬ್ಯಾಂಕ್ ಶಾಖೆ ಉತ್ತಮ ಸಾಧನೆ ಗೈಯಲು ಸಾಧ್ಯವಾಗಿದೆ. ಕೃಷಿ ತೋಟಗಾರಿಕೆ ಮತ್ತಿತರೆ ಕ್ಷೇತ್ರಗಳಲ್ಲಿ ಈ ಭಾಗದಲ್ಲಿ ವಿಪುಲ ಅವಕಾಶಗಳಿದ್ದು ರೈತರು ಅವುಗಳನ್ನು ಬಳಸಿಕೊಳ್ಳಬೇಕು’ ಎಂದರು.