ಗಂಗಾವತಿ: ನಗರದಲ್ಲಿರುವ ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಿಗೆ ತಹಶೀಲ್ದಾರ್ ನಾಗರಾಜ ಅವರು ಭಾನುವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು,‘ಕೊರೊನಾ ಸೋಂಕು ತಪಾಸಣೆಗೆ ಸ್ಕ್ಯಾನಿಂಗ್ ಅವಶ್ಯಕತೆ ಇದ್ದು, ಸಾರ್ವಜನಿಕರು ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ತಪಾಸಣೆ ಮಾಡಿಸುತ್ತಿದ್ದಾರೆ. ಸೆಂಟರ್ಗಳ ಮಾಲೀಕರು ಅಧಿಕ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನುವ ದೂರುಗಳು ಬಂದಿವೆ. ಹಾಗಾಗಿ ಪರಿಶೀಲನೆ ನಡೆಸಿದ್ದೇವೆ’ ಎಂದರು.
ಯಾವುದೇ ಕಾರಣಕ್ಕೂ ಸ್ಕ್ಯಾನಿಂಗ್ ಸೆಂಟರ್ಗಳ ಮಾಲೀಕರು ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡುವಂತಿಲ್ಲ. ಒಂದು ವೇಳೆ ಅಧಿಕ ಹಣ ಪಡೆದಿದ್ದು ಕಂಡುಬಂದರೇ ಕೂಡಲೇ ಸೂಕ್ತ ಕ್ರಮಕ್ಕೆ ಮುಂದಾಗಲಾಗುವುದು ಎಂದು ಹೇಳಿದರು.