ಅಂಜನಾದ್ರಿಯಲ್ಲಿ ಡಿ.23, 24ರಂದು ಎರಡು ದಿನ ಹನುಮ ಮಾಲಾ ವಿಸರ್ಜನೆ ಕಾರ್ಯಕ್ರಮ ಜರುಗಲಿದ್ದು, ಸಾವಿರಾರು ಸಂಖ್ಯೆಯ ಮಾಲಾಧಾರಿಗಳಿಗೆ ಅಂಜನಾದ್ರಿಗೆ ಭೇಟಿ ನೀಡಿ ಮಾಲೆ ವಿಸರ್ಜನೆ ಮಾಡಲಿದ್ದಾರೆ. ಹಾಗಾಗಿ ಅಂಜನಾದ್ರಿ ಬಳಿ ಪಾರ್ಕಿಂಗ್, ಕುಡಿಯುವ ನೀರು, ಊಟ, ಸ್ನಾನ ಗೃಹಗಳ ವ್ಯವಸ್ಥೆ ಕಲ್ಪಿಸಬೇಕು. ಹಾಗೇ ವಸತಿ, ವೈದ್ಯಕೀಯ, ಸಂಚಾರ ದಟ್ಟಣೆ, ಶೌಚಾಲಯ, ರಸ್ತೆ ಮಾರ್ಗದಲ್ಲಿ ವಿದ್ಯುತ್ ವ್ಯವಸ್ಥೆ ಕಲ್ಪಿಸಲು ಈಗಾಗಲೇ ಜಿಲ್ಲಾ, ತಾಲ್ಲೂಕು ಆಡಳಿತದ ಅಧಿಕಾರಿಗಳನ್ನು ಒಳಗೊಂಡ 14 ಸಮಿತಿಗಳು ರಚಿಸಿ, ಮಾಡಬೇಕಾದ ಕೆಲಸದ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ. ಎಲ್ಲರೂ ಅಚ್ಚುಕಟ್ಟಾಗಿ ಕೆಲಸ ಮಾಡಬೇಕು ಎಂದರು.