ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 18ರ ಬಳಿಕ ರಾಜಕೀಯದ ಮಾತು: ಜನಾರ್ದನ ರೆಡ್ಡಿ

Last Updated 6 ಡಿಸೆಂಬರ್ 2022, 13:23 IST
ಅಕ್ಷರ ಗಾತ್ರ

ಗಂಗಾವತಿ (ಕೊಪ್ಪಳ ಜಿಲ್ಲೆ): ನಗರದಲ್ಲಿ ಒಂದು ದಿನದ ಹಿಂದೆಯಷ್ಟೇ ಮನೆ ಖರೀದಿ ಮಾಡಿರುವ ಮಾಜಿ ಸಚಿವ ಬಳ್ಳಾರಿಯ ಜನಾರ್ದನ ರೆಡ್ಡಿ ಮಂಗಳವಾರ ನಗರಸಭೆ ಬಿಜೆಪಿ ಸದಸ್ಯ ರಮೇಶ ಚೌಡ್ಕಿ ಹಾಗೂ ಹಲವು ಮುಖಂಡರ ಮನೆಗೆ ಭೇಟಿ ನೀಡಿದ್ದು, ಜಿಲ್ಲೆಯ ರಾಜಕೀಯ ವಲಯದದಲ್ಲಿ ದೊಟ್ಟಮಟ್ಟದ ಚರ್ಚೆಗೆ ಕಾರಣವಾಗಿದೆ.

ಸೋಮವಾರ ಹನುಮಮಾಲಾ ಸಂಕೀರ್ತನೆ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ರೆಡ್ಡಿ ಮಂಗಳವಾರ ಸೇಂಟ್‌ ಪಾಲ್ಸ್‌ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತುಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬಳಿಕ ಬಿಜೆಪಿ ಮುಖಂಡರ ಮನೆಗಳಿಗೆ ತೆರಳಿದರು.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ‘ಗಂಗಾವತಿಯಲ್ಲಿಯೇ ಮನೆ ಖರೀದಿಸಲು ಕಾರಣ, ಮುಂದಿನ ರಾಜಕೀಯ ನಡೆ ಬಗ್ಗೆ ಡಿ. 18ರ ಬಳಿಕ ಮಾತನಾಡುವೆ. ಗಂಗಾವತಿ ಅಭಿವೃದ್ಧಿಗೆ ಸಾಮಾಜಿಕ ಸೇವೆ ನಿರಂತರವಾಗಿ ಮಾಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT