ಇದಕ್ಕೆ ಪ್ರತಿಕ್ರಿಯಿಸಿದ ತಾಲ್ಲೂಕು ಪಂಚಾಯಿತಿ ಇಒ ಜಯರಾಂ ಚವ್ಹಾಣ,‘ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಮೇಲಧಿಕಾರಿಗಳಿಗೆ ಮನವಿ ಮಾಡಲಾಗುವುದು. ಕೆಲ ಇಲಾಖೆಯ ಅಧಿಕಾರಿಗಳು ಹಾಜರಾಗದೇ ಸಿಬ್ಬಂದಿಯನ್ನು ಕಳುಹಿಸಿದ್ದು, ಕೂಡ ಸರಿಯಾದ ಧೋರಣೆಯಲ್ಲ. ಅಂಥ ಅಧಿಕಾರಿಗಳಿಗೂ ನೋಟಿಸ್ ಜಾರಿ ಮಾಡಲಾಗುವುದು’ ಎಂದು ತಿಳಿಸಿದರು.