<p><strong>ತಾವರಗೇರಾ:</strong> ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್ನ್ನು ಪ.ಪಂ ಆಡಳಿತ ಬುಧವಾರ ಪೊಲೀಸ್ ಬಂದೋಬಸ್ತ್ ಮೂಲಕ ತೆರವು ಕಾರ್ಯ ನಡೆಸಿತು.</p>.<p>ಮುದೇನೂರು ರಸ್ತೆ ಪಕ್ಕದಲ್ಲಿ ಸರ್ಕಾರಿ ಜಾಗದಲ್ಲಿ ಹಲವು ದಿನಗಳಿಂದ ತಗಡಿನ ಶೆಡ್ ನಿರ್ಮಿಸಲಾಗಿತ್ತು. ಮತ್ತು ನಾಡ ಕಾರ್ಯಾಲಯ ಕಚೇರಿಗೆ ಅಡ್ಡಲಾಗಿ ಸಹ ಶೆಡ್ ನಿರ್ಮಿಸಲಾಗಿತ್ತು. </p>.<p>ಈ ಕುರಿತು ಪ.ಪಂ. ಮುಖ್ಯಾಧಿಕಾರಿ ಮಹೇಶ ಅಂಗಡಿ ಪ್ರತಿಕ್ರಿಯೆ ನೀಡಿ, ಸ್ಥಳೀಯರೊಬ್ಬರು ಪ.ಪಂ ಆಡಳಿತಕ್ಕೆ ಮತ್ತು ಜಿಲ್ಲಾ ಯೋಜನಾ ನಿರ್ದೇಶಕರಿಗೆ ನೀಡಿರುವ ದೂರಿನ ಮೇರೆಗೆ ಅನಧಿಕೃತ ಶೆಡ್ ತೆರವು ಮಾಡಲಾಗುತ್ತಿದೆ ಎಂದರು.</p>.<p>ಉಸ್ತುವಾರಿ ಸಚಿವರಿಗೆ, ಯೋಜನಾ ನಿರ್ದೇಶಕರಿಗೆ ದೂರು: ಸ್ಥಳೀಯ ವಕೀಲ ಸುರೇಶ ಗುಡದೂರು ಎಂಬುವವರು ಮುದೇನೂರು ರಸ್ತೆಯ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಶೆಡ್ಗಳನ್ನು ತೆರವು ಮಾಡುವಂತೆ ದೂರು ನೀಡಿರುವ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ. ಈ ಬಗ್ಗೆ ಸುರೇಶ ಮಾತನಾಡಿ, ‘ಪಟ್ಟಣದ ನಾಡ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರದ ಮುಂಭಾಗದ ದಾರಿಗೆ ಅಡ್ಡಲಾಗಿ ಅನಧಿಕೃತ ಶೆಡ್ ನಿರ್ಮಿಸಿದ್ದರಿಂದ ಕಚೇರಿಗೆ ಬರುವ ಸಾರ್ವಜನಿಕರು, ಅಧಿಕಾರಿಗಳಿಗೆ ಅನನುಕೂಲವಾಗಿತ್ತು. ಸರ್ಕಾರಿ ಜಾಗದಲ್ಲಿ ಇಂತಹ ಶೆಡ್ ನಿರ್ಮಾಣ ಮಾಡಿರುವದು ಖಂಡನೀಯ’ ಎಂದರು.</p>.<p>ಈ ಕುರಿತು ‘ಪ್ರಜಾವಾಣಿ’ಯಲ್ಲಿ ಕಳೆದ ವರ್ಷದ ನವೆಂಬರ್ 21ರಂದು ಸರ್ಕಾರಿ ಜಾಗದಲ್ಲಿ ಅಕ್ರಮ ಶೆಡ್ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾವರಗೇರಾ:</strong> ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್ನ್ನು ಪ.ಪಂ ಆಡಳಿತ ಬುಧವಾರ ಪೊಲೀಸ್ ಬಂದೋಬಸ್ತ್ ಮೂಲಕ ತೆರವು ಕಾರ್ಯ ನಡೆಸಿತು.</p>.<p>ಮುದೇನೂರು ರಸ್ತೆ ಪಕ್ಕದಲ್ಲಿ ಸರ್ಕಾರಿ ಜಾಗದಲ್ಲಿ ಹಲವು ದಿನಗಳಿಂದ ತಗಡಿನ ಶೆಡ್ ನಿರ್ಮಿಸಲಾಗಿತ್ತು. ಮತ್ತು ನಾಡ ಕಾರ್ಯಾಲಯ ಕಚೇರಿಗೆ ಅಡ್ಡಲಾಗಿ ಸಹ ಶೆಡ್ ನಿರ್ಮಿಸಲಾಗಿತ್ತು. </p>.<p>ಈ ಕುರಿತು ಪ.ಪಂ. ಮುಖ್ಯಾಧಿಕಾರಿ ಮಹೇಶ ಅಂಗಡಿ ಪ್ರತಿಕ್ರಿಯೆ ನೀಡಿ, ಸ್ಥಳೀಯರೊಬ್ಬರು ಪ.ಪಂ ಆಡಳಿತಕ್ಕೆ ಮತ್ತು ಜಿಲ್ಲಾ ಯೋಜನಾ ನಿರ್ದೇಶಕರಿಗೆ ನೀಡಿರುವ ದೂರಿನ ಮೇರೆಗೆ ಅನಧಿಕೃತ ಶೆಡ್ ತೆರವು ಮಾಡಲಾಗುತ್ತಿದೆ ಎಂದರು.</p>.<p>ಉಸ್ತುವಾರಿ ಸಚಿವರಿಗೆ, ಯೋಜನಾ ನಿರ್ದೇಶಕರಿಗೆ ದೂರು: ಸ್ಥಳೀಯ ವಕೀಲ ಸುರೇಶ ಗುಡದೂರು ಎಂಬುವವರು ಮುದೇನೂರು ರಸ್ತೆಯ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಶೆಡ್ಗಳನ್ನು ತೆರವು ಮಾಡುವಂತೆ ದೂರು ನೀಡಿರುವ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ. ಈ ಬಗ್ಗೆ ಸುರೇಶ ಮಾತನಾಡಿ, ‘ಪಟ್ಟಣದ ನಾಡ ಕಾರ್ಯಾಲಯ, ರೈತ ಸಂಪರ್ಕ ಕೇಂದ್ರದ ಮುಂಭಾಗದ ದಾರಿಗೆ ಅಡ್ಡಲಾಗಿ ಅನಧಿಕೃತ ಶೆಡ್ ನಿರ್ಮಿಸಿದ್ದರಿಂದ ಕಚೇರಿಗೆ ಬರುವ ಸಾರ್ವಜನಿಕರು, ಅಧಿಕಾರಿಗಳಿಗೆ ಅನನುಕೂಲವಾಗಿತ್ತು. ಸರ್ಕಾರಿ ಜಾಗದಲ್ಲಿ ಇಂತಹ ಶೆಡ್ ನಿರ್ಮಾಣ ಮಾಡಿರುವದು ಖಂಡನೀಯ’ ಎಂದರು.</p>.<p>ಈ ಕುರಿತು ‘ಪ್ರಜಾವಾಣಿ’ಯಲ್ಲಿ ಕಳೆದ ವರ್ಷದ ನವೆಂಬರ್ 21ರಂದು ಸರ್ಕಾರಿ ಜಾಗದಲ್ಲಿ ಅಕ್ರಮ ಶೆಡ್ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>