<p><strong>ಕುಷ್ಟಗಿ:</strong> ‘‘ಸಮಾಜದ ನೋವು, ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ವಿದ್ಯಾರ್ಥಿಗಳ ನಾಡಿ ಮಿಡಿತವನ್ನು ಅರಿಯುವ ಕೌಶಲ ಶಿಕ್ಷಕರಲ್ಲಿ ಇರುವುದು ಅಗತ್ಯ’ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ ಹೇಳಿದರು.</p>.<p>2025-26ನೇ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ತಾಲ್ಲೂಕಿನ ತಳುವಗೇರಾದ ಆದರ್ಶ ವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಉತ್ತಮ ಫಲಿತಾಂಶ ಪಡೆಯುವುದಕ್ಕೆ ಶಿಕ್ಷಕರು ಈಗಿನಿಂದಲೇ ಹೆಚ್ಚು ಮುತುವರ್ಜಿ ವಹಿಸುವುದು ಅಗತ್ಯ’ ಎಂದರು.</p>.<p>‘ವಿದ್ಯಾರ್ಥಿಗಳ ಭಾವಿ ಜೀವನಕ್ಕೆ ಉತ್ತಮ ಅಡಿಪಾಯ ಹಾಕುವ ಕೆಲಸ ಶಿಕ್ಷಕರದ್ದಾಗಿರುತ್ತದೆ. ಮಕ್ಕಳಿಗೆ ಉತ್ತಮ ಹಾಗೂ ಅಷ್ಟೇ ಗುಣಮಟ್ಟದ ಶಿಕ್ಷಣ ನೀಡಿದರೆ ಅವರು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವ ಮೂಲಕ ದೇಶಕ್ಕೆ ದೊಡ್ಡಮಟ್ಟದ ಕೊಡುಗೆ ನೀಡಬಲ್ಲರು’ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪೂರ ಮಾತನಾಡಿ, ‘ಸದ್ಯ ಉಳಿದಿರುವ ಅವಧಿಯಲ್ಲಿ ಮಕ್ಕಳಿಗೆ ಪರಿಣಾಮಕಾರಿ ಬೋಧನೆ ಮಾಡುವುದರ ಮೂಲಕ ರಾಜ್ಯದ ಎಸ್ಎಸ್ಎಲ್ಸಿ ಫಲಿತಾಂಶ ಪಟ್ಟಿಯಲ್ಲಿ ಮೊದಲ ಹತ್ತು ಕ್ರಮಾಂಕದಲ್ಲಿ ಸ್ಥಾನಕ್ಕೆ ಪಡೆಯಲು ಶಿಕ್ಷಕರು ಶ್ರಮಿಸಬೇಕು ಎಂದರು.</p>.<p>ಡಯಟ್ ಉಪನ್ಯಾಸಕ ವೆಂಕಟೇಶಗೌಡ, ಬಿ.ಎಂ.ಸವದತ್ತಿ ಮಾತನಾಡಿದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಎಂ.ಜಗದೀಶಪ್ಪ, ಆದರ್ಶ ವಿದ್ಯಾಲಯದ ಮುಖ್ಯಶಿಕ್ಷಕ ಸಂಗಪ್ಪ ಕಿರೇಸೂರು, ಎಸ್ಡಿಎಂಸಿ ಅಧ್ಯಕ್ಷ ಶರಣಪ್ಪ, ಸದಸ್ಯರು, ತಾಲ್ಲೂಕಿನ ಅನುದಾನಿತ ಮತ್ತು ಅನುದಾನ ರಹಿತ ಸೇರಿದಂತೆ 66 ಪ್ರೌಢಶಾಲೆಗಳ ಶಿಕ್ಷಕರು ಭಾಗವಹಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ‘‘ಸಮಾಜದ ನೋವು, ನಿರೀಕ್ಷೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ವಿದ್ಯಾರ್ಥಿಗಳ ನಾಡಿ ಮಿಡಿತವನ್ನು ಅರಿಯುವ ಕೌಶಲ ಶಿಕ್ಷಕರಲ್ಲಿ ಇರುವುದು ಅಗತ್ಯ’ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಗೌಡ ಪಾಟೀಲ ಹೇಳಿದರು.</p>.<p>2025-26ನೇ ಶೈಕ್ಷಣಿಕ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ತಾಲ್ಲೂಕಿನ ತಳುವಗೇರಾದ ಆದರ್ಶ ವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಉತ್ತಮ ಫಲಿತಾಂಶ ಪಡೆಯುವುದಕ್ಕೆ ಶಿಕ್ಷಕರು ಈಗಿನಿಂದಲೇ ಹೆಚ್ಚು ಮುತುವರ್ಜಿ ವಹಿಸುವುದು ಅಗತ್ಯ’ ಎಂದರು.</p>.<p>‘ವಿದ್ಯಾರ್ಥಿಗಳ ಭಾವಿ ಜೀವನಕ್ಕೆ ಉತ್ತಮ ಅಡಿಪಾಯ ಹಾಕುವ ಕೆಲಸ ಶಿಕ್ಷಕರದ್ದಾಗಿರುತ್ತದೆ. ಮಕ್ಕಳಿಗೆ ಉತ್ತಮ ಹಾಗೂ ಅಷ್ಟೇ ಗುಣಮಟ್ಟದ ಶಿಕ್ಷಣ ನೀಡಿದರೆ ಅವರು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈಯುವ ಮೂಲಕ ದೇಶಕ್ಕೆ ದೊಡ್ಡಮಟ್ಟದ ಕೊಡುಗೆ ನೀಡಬಲ್ಲರು’ ಎಂದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಬಸಾಪೂರ ಮಾತನಾಡಿ, ‘ಸದ್ಯ ಉಳಿದಿರುವ ಅವಧಿಯಲ್ಲಿ ಮಕ್ಕಳಿಗೆ ಪರಿಣಾಮಕಾರಿ ಬೋಧನೆ ಮಾಡುವುದರ ಮೂಲಕ ರಾಜ್ಯದ ಎಸ್ಎಸ್ಎಲ್ಸಿ ಫಲಿತಾಂಶ ಪಟ್ಟಿಯಲ್ಲಿ ಮೊದಲ ಹತ್ತು ಕ್ರಮಾಂಕದಲ್ಲಿ ಸ್ಥಾನಕ್ಕೆ ಪಡೆಯಲು ಶಿಕ್ಷಕರು ಶ್ರಮಿಸಬೇಕು ಎಂದರು.</p>.<p>ಡಯಟ್ ಉಪನ್ಯಾಸಕ ವೆಂಕಟೇಶಗೌಡ, ಬಿ.ಎಂ.ಸವದತ್ತಿ ಮಾತನಾಡಿದರು.</p>.<p>ಕ್ಷೇತ್ರ ಸಮನ್ವಯಾಧಿಕಾರಿ ಎಂ.ಜಗದೀಶಪ್ಪ, ಆದರ್ಶ ವಿದ್ಯಾಲಯದ ಮುಖ್ಯಶಿಕ್ಷಕ ಸಂಗಪ್ಪ ಕಿರೇಸೂರು, ಎಸ್ಡಿಎಂಸಿ ಅಧ್ಯಕ್ಷ ಶರಣಪ್ಪ, ಸದಸ್ಯರು, ತಾಲ್ಲೂಕಿನ ಅನುದಾನಿತ ಮತ್ತು ಅನುದಾನ ರಹಿತ ಸೇರಿದಂತೆ 66 ಪ್ರೌಢಶಾಲೆಗಳ ಶಿಕ್ಷಕರು ಭಾಗವಹಿಸಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>