<p><strong>ಕನಕಗಿರಿ</strong>: ಪಟ್ಟಣ ಸೇರಿ ವಿವಿಧ ಗ್ರಾಮಗಳಲ್ಲಿ ಶನಿವಾರ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.</p>.<p>ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಉನ್ನತೀಕರಿಸಿದ ಶಾಲೆಯಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸಣ್ಣ ಕನಕಪ್ಪ ಅವರು ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.</p>.<p>ಪ್ರಭಾರ ಮಖ್ಯಶಿಕ್ಷಕ ಮಲ್ಲಿಕಾರ್ಜುನ ಕುಷ್ಟಗಿ ಮಾತನಾಡಿ,‘ಸಮಾಜದಲ್ಲಿ ಶಿಕ್ಷಕರ ವೃತ್ತಿ ಪ್ರವಿತ್ರವಾದದ್ದು. ಅದನ್ನು ಉಳಿಸಿ ಬೆಳಸಿಕೊಂಡು ಹೋಗಬೇಕು’ ಎಂದು ತಿಳಿಸಿದರು.</p>.<p>ಶಿಕ್ಷಕರಾದ ದುರಗಪ್ಪ, ಹುಲಿಗೆಮ್ಮ ದಂಡೀನ್ ಸೇರಿದಂತೆ ಶಿಕ್ಷಕರು ಇದ್ದರು.</p>.<p>ದ್ಯಾಮ್ಮವನಗುಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕಿ ನಾಗರತ್ನ, ಶಿಕ್ಷಕಿ ಶಂಶಾದಬೇಗಂ ಮಾತನಾಡಿದರು. ಶಿಕ್ಷಕರಾದ ಗೌರಮ್ಮ ಬಳಿಗಾರ, ಅಕ್ಕಮಹಾದೇವಿ ಕಿತ್ತೂರು ಹಾಗೂ ಶಿವಕುಮಾರ ಇದ್ದರು.</p>.<p>ಸಮೀಪದ ಹುಲಿಹೈದರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯಲ್ಲಿ ಪ್ರಾಂಶುಪಾಲ ಕೊಟ್ರೇಶ ಮುಕಾರಿ, ಶಿಕ್ಷಕರಾದ ಎ.ಕೆ. ಪರಶುರಾಮ, ಅಂಬಿಕಾ ಪಾಟೀಲ ಹಾಗೂ ಎಚ್. ಕನಕರಾಯ ಡಗ್ಗಿ ಇದ್ದರು.</p>.<p class="Briefhead"><strong>‘ಶಿಕ್ಷಕರನ್ನು ನಿರ್ಲಕ್ಷ್ಯಿಸದಿರಿ’</strong></p>.<p>ಕಾರಟಗಿ: ಶಿಕ್ಷಕರ ಬಗ್ಗೆ ಸರ್ಕಾರ ಮಲತಾಯಿ ಧೋರಣೆ ನೀತಿ ಅನುಸರಿಸುತ್ತಿರುವುದು ತರವಲ್ಲ. ಖಾಸಗಿ ಶಾಲಾ ಶಿಕ್ಷಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರ ನೆರವಿಗೆ ಸರ್ಕಾರವು ವಿಶೇಷ ಪ್ಯಾಕೇಜ್ ಘೋಷಿಸಬೇಕು’ ಎಂದು ಶಿಕ್ಷಕ ಶರಣಪ್ಪ ಅಂಗಡಿ ಹೇಳಿದರು.</p>.<p>ಪಟ್ಟಣದ ಶಾಂತಿನಿಕೇತನ ಪಬ್ಲಿಕ್ ಶಾಲಾ ಆವರಣದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೊರೊನಾ ಲಾಕ್ಡೌನ್ ಪರಿಣಾಮದಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ. ಶಿಕ್ಷಕರು ಆರ್ಥಿಕವಾಗಿ ಸಂಕಷ್ಟ ಅನುಭವಿಸುತ್ತಾ, ನಿತ್ಯದ ಜೀವನ ನಡೆಸಲು ಹರಸಾಹಸ ಪಡುವಂತಾಗಿದೆ’ ಎಂದರು.</p>.<p>ಶಿಕ್ಷಣ ಸಂಸ್ಥೆಯ ಶರಣಪ್ಪ, ಶಿಕ್ಷಕ ಮಲ್ಲಿಕಾರ್ಜುನ ಹಂಚಿನಾಳ, ನಾಗರಾಜ ಚಳ್ಳೂರು ಇದ್ದರು.</p>.<p class="Briefhead"><strong>‘ಮಾರ್ಗದರ್ಶಿ ಶಿಕ್ಷಕರಿಂದ ಮಕ್ಕಳಿಗೆ ಉತ್ತಮ ಭವಿಷ್ಯ’</strong></p>.<p>ಗಂಗಾವತಿ : ಎಲ್ಲಿ ಶಿಕ್ಷಕರು ಮಾರ್ಗದರ್ಶಿಗಳಾಗುತ್ತಾರೆಯೋ ಅಲ್ಲಿ ಉತ್ತಮ ವಿದ್ಯಾರ್ಥಿಗಳು ನಿರ್ಮಾಣವಾಗುತ್ತಾರೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ರಫಿ ಹೇಳಿದರು.</p>.<p>ನಗರದ ಐಎಂಎ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ಮತ್ತು ಶಿಕ್ಷಣಾಧಿಕಾರಿಗಳ ಸಂಘದ ವತಿಯಿಂದ ಸರಳವಾಗಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕಳೆದ ತಿಂಗಳ ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಈ ಭಾಗಕ್ಕೆ ಕೀರ್ತಿ ತಂದಿದ್ದಾರೆ. ಕೋವಿಡ್ ಸಮಯದಲ್ಲೂ ಶಿಕ್ಷಕರು ತಮ್ಮ ಜೀವವನ್ನು ಲೆಕ್ಕಿಸದೇ, ವಠಾರ, ವಿದ್ಯಾಗಮ ಯೋಜನೆಗಳ ಮೂಲಕ ಮಕ್ಕಳಿಗೆ ಪಾಠ ಮಾಡುವ ಮೂಲಕ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಮಾತನಾಡಿದರು.</p>.<p>ಕನಕಗಿರಿ ತಹಶೀಲ್ದಾರ್ ರವಿ ಅಂಗಡಿ, ತಾಲ್ಲೂಕು ಪಂಚಾಯಿತಿ ಇಒ ಡಾ.ಡಿ.ಮೋಹನ್, ತಾ.ಪಂ. ಉಪಾಧ್ಯಕ್ಷೆ ಗೀತಾ ಶರಣೇಗೌಡ, ಅಧಿಕಾರಿ ವಿವಿ ಗೊಂಡಬಾಳ, ಸಿಡಿಪಿಒ ಗಂಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ</strong>: ಪಟ್ಟಣ ಸೇರಿ ವಿವಿಧ ಗ್ರಾಮಗಳಲ್ಲಿ ಶನಿವಾರ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.</p>.<p>ಶಾಸಕರ ಮಾದರಿಯ ಹಿರಿಯ ಪ್ರಾಥಮಿಕ ಉನ್ನತೀಕರಿಸಿದ ಶಾಲೆಯಲ್ಲಿ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸಣ್ಣ ಕನಕಪ್ಪ ಅವರು ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿದರು.</p>.<p>ಪ್ರಭಾರ ಮಖ್ಯಶಿಕ್ಷಕ ಮಲ್ಲಿಕಾರ್ಜುನ ಕುಷ್ಟಗಿ ಮಾತನಾಡಿ,‘ಸಮಾಜದಲ್ಲಿ ಶಿಕ್ಷಕರ ವೃತ್ತಿ ಪ್ರವಿತ್ರವಾದದ್ದು. ಅದನ್ನು ಉಳಿಸಿ ಬೆಳಸಿಕೊಂಡು ಹೋಗಬೇಕು’ ಎಂದು ತಿಳಿಸಿದರು.</p>.<p>ಶಿಕ್ಷಕರಾದ ದುರಗಪ್ಪ, ಹುಲಿಗೆಮ್ಮ ದಂಡೀನ್ ಸೇರಿದಂತೆ ಶಿಕ್ಷಕರು ಇದ್ದರು.</p>.<p>ದ್ಯಾಮ್ಮವನಗುಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಶಿಕ್ಷಕಿ ನಾಗರತ್ನ, ಶಿಕ್ಷಕಿ ಶಂಶಾದಬೇಗಂ ಮಾತನಾಡಿದರು. ಶಿಕ್ಷಕರಾದ ಗೌರಮ್ಮ ಬಳಿಗಾರ, ಅಕ್ಕಮಹಾದೇವಿ ಕಿತ್ತೂರು ಹಾಗೂ ಶಿವಕುಮಾರ ಇದ್ದರು.</p>.<p>ಸಮೀಪದ ಹುಲಿಹೈದರ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯಲ್ಲಿ ಪ್ರಾಂಶುಪಾಲ ಕೊಟ್ರೇಶ ಮುಕಾರಿ, ಶಿಕ್ಷಕರಾದ ಎ.ಕೆ. ಪರಶುರಾಮ, ಅಂಬಿಕಾ ಪಾಟೀಲ ಹಾಗೂ ಎಚ್. ಕನಕರಾಯ ಡಗ್ಗಿ ಇದ್ದರು.</p>.<p class="Briefhead"><strong>‘ಶಿಕ್ಷಕರನ್ನು ನಿರ್ಲಕ್ಷ್ಯಿಸದಿರಿ’</strong></p>.<p>ಕಾರಟಗಿ: ಶಿಕ್ಷಕರ ಬಗ್ಗೆ ಸರ್ಕಾರ ಮಲತಾಯಿ ಧೋರಣೆ ನೀತಿ ಅನುಸರಿಸುತ್ತಿರುವುದು ತರವಲ್ಲ. ಖಾಸಗಿ ಶಾಲಾ ಶಿಕ್ಷಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರ ನೆರವಿಗೆ ಸರ್ಕಾರವು ವಿಶೇಷ ಪ್ಯಾಕೇಜ್ ಘೋಷಿಸಬೇಕು’ ಎಂದು ಶಿಕ್ಷಕ ಶರಣಪ್ಪ ಅಂಗಡಿ ಹೇಳಿದರು.</p>.<p>ಪಟ್ಟಣದ ಶಾಂತಿನಿಕೇತನ ಪಬ್ಲಿಕ್ ಶಾಲಾ ಆವರಣದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೊರೊನಾ ಲಾಕ್ಡೌನ್ ಪರಿಣಾಮದಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿವೆ. ಶಿಕ್ಷಕರು ಆರ್ಥಿಕವಾಗಿ ಸಂಕಷ್ಟ ಅನುಭವಿಸುತ್ತಾ, ನಿತ್ಯದ ಜೀವನ ನಡೆಸಲು ಹರಸಾಹಸ ಪಡುವಂತಾಗಿದೆ’ ಎಂದರು.</p>.<p>ಶಿಕ್ಷಣ ಸಂಸ್ಥೆಯ ಶರಣಪ್ಪ, ಶಿಕ್ಷಕ ಮಲ್ಲಿಕಾರ್ಜುನ ಹಂಚಿನಾಳ, ನಾಗರಾಜ ಚಳ್ಳೂರು ಇದ್ದರು.</p>.<p class="Briefhead"><strong>‘ಮಾರ್ಗದರ್ಶಿ ಶಿಕ್ಷಕರಿಂದ ಮಕ್ಕಳಿಗೆ ಉತ್ತಮ ಭವಿಷ್ಯ’</strong></p>.<p>ಗಂಗಾವತಿ : ಎಲ್ಲಿ ಶಿಕ್ಷಕರು ಮಾರ್ಗದರ್ಶಿಗಳಾಗುತ್ತಾರೆಯೋ ಅಲ್ಲಿ ಉತ್ತಮ ವಿದ್ಯಾರ್ಥಿಗಳು ನಿರ್ಮಾಣವಾಗುತ್ತಾರೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ರಫಿ ಹೇಳಿದರು.</p>.<p>ನಗರದ ಐಎಂಎ ಭವನದಲ್ಲಿ ಶನಿವಾರ ಕರ್ನಾಟಕ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ಮತ್ತು ಶಿಕ್ಷಣಾಧಿಕಾರಿಗಳ ಸಂಘದ ವತಿಯಿಂದ ಸರಳವಾಗಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕಳೆದ ತಿಂಗಳ ಯುಪಿಎಸ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಈ ಭಾಗಕ್ಕೆ ಕೀರ್ತಿ ತಂದಿದ್ದಾರೆ. ಕೋವಿಡ್ ಸಮಯದಲ್ಲೂ ಶಿಕ್ಷಕರು ತಮ್ಮ ಜೀವವನ್ನು ಲೆಕ್ಕಿಸದೇ, ವಠಾರ, ವಿದ್ಯಾಗಮ ಯೋಜನೆಗಳ ಮೂಲಕ ಮಕ್ಕಳಿಗೆ ಪಾಠ ಮಾಡುವ ಮೂಲಕ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಮಾತನಾಡಿದರು.</p>.<p>ಕನಕಗಿರಿ ತಹಶೀಲ್ದಾರ್ ರವಿ ಅಂಗಡಿ, ತಾಲ್ಲೂಕು ಪಂಚಾಯಿತಿ ಇಒ ಡಾ.ಡಿ.ಮೋಹನ್, ತಾ.ಪಂ. ಉಪಾಧ್ಯಕ್ಷೆ ಗೀತಾ ಶರಣೇಗೌಡ, ಅಧಿಕಾರಿ ವಿವಿ ಗೊಂಡಬಾಳ, ಸಿಡಿಪಿಒ ಗಂಗಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>