ಕೊಪ್ಪಳ:ಜಿಲ್ಲೆಯ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಿ, ಕನಕಗಿರಿಯ ಕನಕಾಚಲಪತಿ ಮತ್ತು ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪೂರದ (ಆನೆಗೊಂದಿಯ) ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಎಲ್ಲ ಸೇವೆಗಳು, ಕೊಠಡಿಗಳು ಹಾಗೂ ಅನ್ನಪ್ರಸಾದ ಆರಂಭಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಆದೇಶ ಹೊರಡಿಸಿದ್ದಾರೆ.