ಕುಷ್ಟಗಿ ಮತ್ತು ಇಳಕಲ್ ಮಾರ್ಗದ ಬಸ್ಗಳಲ್ಲಿ ಸಂಚರಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ತಂಗುದಾಣ ನಿರ್ಮಿಸಲಾಗಿದೆ. ಆದರೆ, ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದಿಂದಾಗಿ ಅದು ಪ್ರಯಾಣಿಕರ ಪಾಲಿಗೆ ಇದ್ದೂ ಇಲ್ಲದಂತಾಗಿದೆ. ಕಟ್ಟಡ ಅಲ್ಲಲ್ಲಿ ಶಿಥಿಲಗೊಂಡಿದ್ದು, ಒಳಗಿನ ಆವರಣ ನಿರ್ವಹಣೆ ಇಲ್ಲದೆ ಹಾಳಾಗುತ್ತಿದೆ. ಕಸ, ವಿವಿಧ ರೀತಿಯ ತ್ಯಾಜ್ಯದಿಂದ ಮಲೀನಗೊಂಡಿದ್ದರಿಂದ ಇದರಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲು ಸಾಧ್ಯವಿಲ್ಲದಂತಾಗಿದೆ. ಬೇಸಿಗೆಯಲ್ಲಿ ಬಿಸಿಲಿನ ತಾಪ, ಮಳೆಗಾಲದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಪ್ರಯಾಣಿಕರಿಗೆ ಆಶ್ರಯ ನೀಡಬೇಕಿರುವ ತಂಗುದಾಣ ಅವ್ಯವಸ್ಥೆಯ ಆಗರವಾಗಿ ಪ್ರಯೋಜನಕ್ಕೆ ಬಾರದಂತಾಗಿದೆ ಎಂದು ಪ್ರಯಾಣಿಕರು ದೂರಿದರು.