<p><strong>ಕೊಪ್ಪಳ</strong>: ‘ಕೂಸಿನ ಮನೆಗಳು ಮಕ್ಕಳ ಆಕರ್ಷಣೆಯ ಕೇಂದ್ರಗಳಾಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆ ಹೇಳಿದರು.</p>.<p>ತಾಲ್ಲೂಕಿನ ಕಿನ್ನಾಳ ಗ್ರಾಮ ಪಂಚಾಯಿತಿಗೆ ಶುಕ್ರವಾರ ಭೇಟಿ ನೀಡಿದ ಅವರು ‘ಈಗಾಗಲೇ ಕಟ್ಟಡಕ್ಕೆ ರಂಗು ರಂಗಿನಿಂದ ಮಕ್ಕಳ ಚಿತ್ರಗಳನ್ನು ಬಿಡಿಸಲಾಗಿದೆ. ಮನೆಗೆ ಸೋಲಾರ್ ವ್ಯವಸ್ಥೆ ಅಳವಡಿಸಿದಲ್ಲಿ ವಿದ್ಯುತ್ ಸಮಸ್ಯೆ ಉದ್ಭವಿಸುವದಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ವಿನೂತನ ಆಟಿಕೆ ಸಾಮಗ್ರಿ ಒದಗಿಸಬೇಕು. ಈ ಮನೆಗಳನ್ನು ಮಾದರಿ ಕೇಂದ್ರಗಳನ್ನಾಗಿ ಮಾಡಬೇಕು’ ಎಂದರು.</p>.<p>ಗ್ರಾಮ ಪಂಚಾಯತಿಯ ಅಂಗವಿಕಲರ ಸ್ನೇಹಿ ಗ್ರಂಥಾಲಯಕ್ಕೆ ಭೇಟಿ ನೀಡಿ ಅಗತ್ಯ ಸೌಲಭ್ಯ ಕಲ್ಪಿಸಿರುವ ಬಗ್ಗೆ ಪರಿಶೀಲಿಸಿದರು. ಗ್ರಾ.ಪಂ.ನಿಂದ ನರೇಗಾ ಯೋಜನೆಯಡಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಉದ್ಯಾನ ಪರಿಶೀಲಿಸಿದರು.</p>.<p>ಜಿ.ಪಂ. ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ಪಿಡಿಒ ವೀರನಗೌಡ, ಕಾರ್ಯದರ್ಶಿ ನೀಲಮ್ಮ, ಗ್ರಾ.ಪಂ ಸಿಬ್ಬಂದಿ ಚಂದ್ರಶೇಖರ, ವಿರೇಶ್, ಮಂಜುನಾಥ, ಕಾರ್ತಿಕ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಕೂಸಿನ ಮನೆಗಳು ಮಕ್ಕಳ ಆಕರ್ಷಣೆಯ ಕೇಂದ್ರಗಳಾಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ರತ್ನಂ ಪಾಂಡೆ ಹೇಳಿದರು.</p>.<p>ತಾಲ್ಲೂಕಿನ ಕಿನ್ನಾಳ ಗ್ರಾಮ ಪಂಚಾಯಿತಿಗೆ ಶುಕ್ರವಾರ ಭೇಟಿ ನೀಡಿದ ಅವರು ‘ಈಗಾಗಲೇ ಕಟ್ಟಡಕ್ಕೆ ರಂಗು ರಂಗಿನಿಂದ ಮಕ್ಕಳ ಚಿತ್ರಗಳನ್ನು ಬಿಡಿಸಲಾಗಿದೆ. ಮನೆಗೆ ಸೋಲಾರ್ ವ್ಯವಸ್ಥೆ ಅಳವಡಿಸಿದಲ್ಲಿ ವಿದ್ಯುತ್ ಸಮಸ್ಯೆ ಉದ್ಭವಿಸುವದಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ವಿನೂತನ ಆಟಿಕೆ ಸಾಮಗ್ರಿ ಒದಗಿಸಬೇಕು. ಈ ಮನೆಗಳನ್ನು ಮಾದರಿ ಕೇಂದ್ರಗಳನ್ನಾಗಿ ಮಾಡಬೇಕು’ ಎಂದರು.</p>.<p>ಗ್ರಾಮ ಪಂಚಾಯತಿಯ ಅಂಗವಿಕಲರ ಸ್ನೇಹಿ ಗ್ರಂಥಾಲಯಕ್ಕೆ ಭೇಟಿ ನೀಡಿ ಅಗತ್ಯ ಸೌಲಭ್ಯ ಕಲ್ಪಿಸಿರುವ ಬಗ್ಗೆ ಪರಿಶೀಲಿಸಿದರು. ಗ್ರಾ.ಪಂ.ನಿಂದ ನರೇಗಾ ಯೋಜನೆಯಡಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಉದ್ಯಾನ ಪರಿಶೀಲಿಸಿದರು.</p>.<p>ಜಿ.ಪಂ. ಯೋಜನಾ ನಿರ್ದೇಶಕ ಟಿ.ಕೃಷ್ಣಮೂರ್ತಿ, ತಾಲ್ಲೂಕು ಪಂಚಾಯಿತಿ ಇಒ ದುಂಡಪ್ಪ ತುರಾದಿ, ಪಿಡಿಒ ವೀರನಗೌಡ, ಕಾರ್ಯದರ್ಶಿ ನೀಲಮ್ಮ, ಗ್ರಾ.ಪಂ ಸಿಬ್ಬಂದಿ ಚಂದ್ರಶೇಖರ, ವಿರೇಶ್, ಮಂಜುನಾಥ, ಕಾರ್ತಿಕ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>