ಸ್ವಚ್ಛತೆ ಮತ್ತು ಆರೋಗ್ಯ ಅಧಿಕಾರಿ ನಾಗೇಂದ್ರ ಮಾತನಾಡಿ,‘ಶಾಲೆಗೆ ಬರುವ ಆಹಾರ ಪಡಿತರಗಳ ಗುಣಮಟ್ಟ ಪರಿಶೀಲಿಸಿ, ಗುಣಮಟ್ಟ ಖಾತರಿ ಪಡಿಸಬೇಕು. ಆಹಾರ ಪದಾರ್ಥಗಳು, ತರಕಾರಿಗಳನ್ನು ಬಳಸಿಕೊಳ್ಳುವ ಮುನ್ನ ಅವುಗಳ ಸ್ವಚ್ಛತೆಗೆ ಮಹತ್ವ ನೀಡಿ, ಗುಣಮಟ್ಟ ಪರಿಶೀಲಿಸಿದ ಬಳಿಕವೇ ಬಳಸಬೇಕು, ಅಡುಗೆ ಸಿಬ್ಬಂದಿ ಒಂದು ಕ್ಷಣ ಕರ್ತವ್ಯದಲ್ಲಿ ಲೋಪವೆಸಗಿದರೆ, ಅದರ ಪರಿಣಾಮ ವಿದ್ಯಾರ್ಥಿಗಳ ಮೇಲೆ ಬೀರುವುದರಿಂದ ಜಾಗ್ರತೆ ವಹಿಸಬೇಕು’ ಎಂದರು.