<p><strong>ತಾವರಗೇರಾ:</strong> ಸೋಮವಾರದಿಂದ ಬಸ್ ಸಂಚಾರ ಆರಂಭವಾಗಲಿದ್ದು, ಸಂಚಾರ ನಿಯಂತ್ರಣಾಧಿಕಾರಿ ಮಹಾಂತೇಶ ಅವರು ಭಾನುವಾರ ಸ್ಥಳೀಯರ ನೆರವಿನಿಂದ ಬಸ್ ನಿಲ್ದಾಣ ಸ್ವಚ್ಛಗೊಳಿಸಿದರು.</p>.<p>ಮಹಾಂತೇಶ ಅವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಲಾಕ್ಡೌನ್ ಘೋಷಣೆಯಾದ ಬಳಿಕ ಬಸ್ ನಿಲ್ದಾಣ ಬಂದ್ ಮಾಡಲಾಗಿತ್ತು. ಸ್ವಚ್ಛತೆ ಮರೀಚಿಕೆಯಾಗಿತ್ತು. ಇದನ್ನು ಗಮನಿಸಿದ ನಿಯಂತ್ರಣಾಧಿಕಾರಿ ಮಹಾಂತೇಶ ಭಾನುವಾರ ಬೆಳಿಗ್ಗೆ ಶ್ರಮದಾನ ಮಾಡಿದರು.</p>.<p>ಸ್ಥಳೀಯರಾದ ಮಹಿಬೂಬ ಕೂಲಿ, ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಆಟೊ ಚಾಲಕರ ಸಂಘದ ಅಧ್ಯಕ್ಷ್ಷ ಗರೀಬ್ಪಾಷಾ ಕೂಲಿ, ಶ್ಯಾಮರಾಜ ಕಲಾಲ, ಶರಣೆಗೌಡ, ಬಾಜಾಖಾನ, ಬಸವರಾಜ ಕುಂಬಾರ ಅವರು ಕೈಜೋಡಿಸಿದರು. ಕಸಗುಡಿಸಿ, ಟ್ಯಾಂಕರ್ ನೀರು ಹಾಕಿ, ಇಡೀ ಆವರಣ ಸ್ವಚ್ಛ ಮಾಡಲಾಯಿತು.</p>.<p>‘ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಹೆಚ್ಚು ಕಸ ಸಂಗ್ರಹವಾಗಿತ್ತು. ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿತ್ತು. ಪ್ರಯಾಣಿಕರ ಆಸನಗಳ ಮೇಲೆ ಉಗುಳಲಾಗಿತ್ತು. ಅದನ್ನು ಸ್ವಚ್ಛ ಮಾಡಲಾಯಿತು’ ಎಂದು ಹೇಳಿದರು.</p>.<p>‘ಸೋಮವಾರ ಬಸ್ ಸಂಚಾರ ಆರಂಭಿಸಲು ಸರ್ಕಾರ ಅವಕಾಶ ನೀಡಿದೆ. ಮಾರ್ಗಸೂಚಿ ಪಾಲಿಸುವ ಮೂಲಕ ಆರಂಭಿಸಲಾಗುವುದು’ ಎಂದು ನಿಯಂತ್ರಣಾಧಿಕಾರಿ ಮಹಾಂತೇಶ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾವರಗೇರಾ:</strong> ಸೋಮವಾರದಿಂದ ಬಸ್ ಸಂಚಾರ ಆರಂಭವಾಗಲಿದ್ದು, ಸಂಚಾರ ನಿಯಂತ್ರಣಾಧಿಕಾರಿ ಮಹಾಂತೇಶ ಅವರು ಭಾನುವಾರ ಸ್ಥಳೀಯರ ನೆರವಿನಿಂದ ಬಸ್ ನಿಲ್ದಾಣ ಸ್ವಚ್ಛಗೊಳಿಸಿದರು.</p>.<p>ಮಹಾಂತೇಶ ಅವರ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p>.<p>ಲಾಕ್ಡೌನ್ ಘೋಷಣೆಯಾದ ಬಳಿಕ ಬಸ್ ನಿಲ್ದಾಣ ಬಂದ್ ಮಾಡಲಾಗಿತ್ತು. ಸ್ವಚ್ಛತೆ ಮರೀಚಿಕೆಯಾಗಿತ್ತು. ಇದನ್ನು ಗಮನಿಸಿದ ನಿಯಂತ್ರಣಾಧಿಕಾರಿ ಮಹಾಂತೇಶ ಭಾನುವಾರ ಬೆಳಿಗ್ಗೆ ಶ್ರಮದಾನ ಮಾಡಿದರು.</p>.<p>ಸ್ಥಳೀಯರಾದ ಮಹಿಬೂಬ ಕೂಲಿ, ಕನ್ನಡ ಸೇನೆ ಕರ್ನಾಟಕ ಸಂಘಟನೆಯ ಆಟೊ ಚಾಲಕರ ಸಂಘದ ಅಧ್ಯಕ್ಷ್ಷ ಗರೀಬ್ಪಾಷಾ ಕೂಲಿ, ಶ್ಯಾಮರಾಜ ಕಲಾಲ, ಶರಣೆಗೌಡ, ಬಾಜಾಖಾನ, ಬಸವರಾಜ ಕುಂಬಾರ ಅವರು ಕೈಜೋಡಿಸಿದರು. ಕಸಗುಡಿಸಿ, ಟ್ಯಾಂಕರ್ ನೀರು ಹಾಕಿ, ಇಡೀ ಆವರಣ ಸ್ವಚ್ಛ ಮಾಡಲಾಯಿತು.</p>.<p>‘ಬಸ್ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಹೆಚ್ಚು ಕಸ ಸಂಗ್ರಹವಾಗಿತ್ತು. ಕೊಳಚೆ ನೀರು ನಿಂತು ದುರ್ವಾಸನೆ ಬೀರುತ್ತಿತ್ತು. ಪ್ರಯಾಣಿಕರ ಆಸನಗಳ ಮೇಲೆ ಉಗುಳಲಾಗಿತ್ತು. ಅದನ್ನು ಸ್ವಚ್ಛ ಮಾಡಲಾಯಿತು’ ಎಂದು ಹೇಳಿದರು.</p>.<p>‘ಸೋಮವಾರ ಬಸ್ ಸಂಚಾರ ಆರಂಭಿಸಲು ಸರ್ಕಾರ ಅವಕಾಶ ನೀಡಿದೆ. ಮಾರ್ಗಸೂಚಿ ಪಾಲಿಸುವ ಮೂಲಕ ಆರಂಭಿಸಲಾಗುವುದು’ ಎಂದು ನಿಯಂತ್ರಣಾಧಿಕಾರಿ ಮಹಾಂತೇಶ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>