‘ಸ್ವಚ್ಛ ಮನಸ್ಸು’ ಎನ್ನುವ ಪರಿಕಲ್ಪನೆಯಲ್ಲಿ ರಾಜ್ಯಾದಾದ್ಯಂತ ಸ್ವಚ್ಛತಾ ಅಭಿಯಾನದ ಕಾರ್ಯಕ್ರಮಗಳನ್ನು ನಡೆಸುತ್ತಿರುವ ಈ ಮಹಿಳಾ ತಂಡದಲ್ಲಿ ಶಿವಮೊಗ್ಗ, ಬೆಂಗಳೂರು, ಕೊಪ್ಪಳ, ವಿಜಯನಗರ, ಧಾರವಾಡ, ದಕ್ಷಿಣ ಕನ್ನಡ ಹಾಗೂ ಬಳ್ಳಾರಿ ಜಿಲ್ಲೆಗಳ ಸದಸ್ಯೆಯರು ಇದ್ದಾರೆ. ಎಂಟು ವರ್ಷಗಳಿಂದ ರಾಜ್ಯದ ವಿವಿಧೆಡೆ ಸ್ವಚ್ಛತಾ ಕಾರ್ಯಗಳನ್ನು ಮಾಡಿಕೊಂಡು ಬಂದಿದ್ದಾರೆ.