ಕೊಪ್ಪಳದಿಂದ ಪ್ರತಿದಿನ ತಾಲ್ಲೂಕಿನ ವಿವಿಧ ಶಾಲೆಗಳಿಗೆ ಹತ್ತಾರು ಶಿಕ್ಷಕರು, ವಿವಿಧ ಇಲಾಖೆಗಳ ನೌಕರರು ಬರುತ್ತಿದ್ದು, ಬಸ್ ಓಡಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿಕೊಂಡರೂ ಸಾರಿಗೆ ಅಧಿಕಾರಿಗಳು ಪ್ರಯಾಣಿಕರ ನೆಪದಲ್ಲಿ ಕ್ಯಾರೆ ಎನ್ನದೆ ಬಸ್ ಓಡಿಸಿಲ್ಲ. ಹತ್ತಾರು ಜನ ನೌಕರರು ಹಾಗೂ ಇತರ ಪ್ರಯಾಣಿಕರು ಬೇರೆ ದಾರಿ ಇಲ್ಲದೆ ಟಾಟಾ ಏಸ್ ವಾಹನವನ್ನು ಬಾಡಿಗೆ ಮಾಡಿಕೊಂಡು ಶಾಲೆ, ಕಚೇರಿಗೆ ಬರುವಂತಾಗಿದೆ ಎಂದು ಶಿಕ್ಷಕರು ‘ಪ್ರಜಾವಾಣಿ’ ಮುಂದೆ ಅಳಲು ತೋಡಿಕೊಂಡರು.