<p><strong>ಗಂಗಾವತಿ</strong>: ‘ಬಿಜೆಪಿಯಲ್ಲಿ ಮೂಲ ಬಿಜೆಪಿಗರು, ವಲಸಿಗ ಬಿಜೆಪಿಗರು ಎಂದು ಇಲ್ಲ. ಗುಂಪುಗಾರಿಕೆ ಇಲ್ಲ’ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.</p>.<p>ಶನಿವಾರ ಸಂಜೆ ನಗರದ ಶಾಸಕ ಪರಣ್ಣ ಮುನವಳ್ಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎನ್ನುವುದು ಹೊಸ ಬೇಡಿಕೆ ಅಲ್ಲ. ಈ ಬಗ್ಗೆ ಅಖಿಲ ಭಾರತ ವೀರಶೈವ ಮಹಾಸಭಾ ಕಳೆದ 35 ವರ್ಷಗಳಿಂದ ಹಿಂದಿನ ಎಲ್ಲ ಸರ್ಕಾರಗಳಿಗೆ ಮನವಿ ಮಾಡುತ್ತ ಬಂದಿದೆ ಎಂದರು.</p>.<p>ಆ ಸಂದರ್ಭದಲ್ಲಿ ಪರಿಗಣನೆ ಮಾಡಿಲ್ಲ. ಹಾಗಾಗಿ ಇದೀಗ ಮುಖ್ಯಮಂತ್ರಿಗಳು ಪರಿಗಣನೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನೀಡಿರುವ ತೀರ್ಪುಗಳನ್ನು ಗಮನಿಸುತ್ತೇವೆ. ನಂತರ ಶಿಫಾರಸು ಮಾಡುತ್ತೇವೆ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಮತ್ತೊಂದು ಮಹಿಳಾ ಪೊಲೀಸ್ ಠಾಣೆಗೆ ಬೇಡಿಕೆ ಇದೆ. ಈ ಕುರಿತು ಚರ್ಚಿಸಲಾಗುವುದು. ಶೀಘ್ರದಲ್ಲೇ 16000 ಪೊಲೀಸ್ ಹುದ್ದೆ ಭರ್ತಿ ಮಾಡಲಾಗುವುದು ಎಂದರು.</p>.<p>ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿಗಳ ಬಳಿ ಮಾತನಾಡುವುದಾಗಿ ಹೇಳಿದರು.</p>.<p>ಸಂಸದ ಸಂಗಣ್ಣ ಕರಡಿ, ಶಾಸಕ ಪರಣ್ಣ ಮುನವಳ್ಳಿ, ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಪ್ರಮುಖರಾದ ಗಿರೇಗೌಡ, ಸಿದ್ದರಾಮಸ್ವಾಮಿ, ಸಾಗರ್ ಮುನವಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ‘ಬಿಜೆಪಿಯಲ್ಲಿ ಮೂಲ ಬಿಜೆಪಿಗರು, ವಲಸಿಗ ಬಿಜೆಪಿಗರು ಎಂದು ಇಲ್ಲ. ಗುಂಪುಗಾರಿಕೆ ಇಲ್ಲ’ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.</p>.<p>ಶನಿವಾರ ಸಂಜೆ ನಗರದ ಶಾಸಕ ಪರಣ್ಣ ಮುನವಳ್ಳಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಬೇಕು ಎನ್ನುವುದು ಹೊಸ ಬೇಡಿಕೆ ಅಲ್ಲ. ಈ ಬಗ್ಗೆ ಅಖಿಲ ಭಾರತ ವೀರಶೈವ ಮಹಾಸಭಾ ಕಳೆದ 35 ವರ್ಷಗಳಿಂದ ಹಿಂದಿನ ಎಲ್ಲ ಸರ್ಕಾರಗಳಿಗೆ ಮನವಿ ಮಾಡುತ್ತ ಬಂದಿದೆ ಎಂದರು.</p>.<p>ಆ ಸಂದರ್ಭದಲ್ಲಿ ಪರಿಗಣನೆ ಮಾಡಿಲ್ಲ. ಹಾಗಾಗಿ ಇದೀಗ ಮುಖ್ಯಮಂತ್ರಿಗಳು ಪರಿಗಣನೆ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ನೀಡಿರುವ ತೀರ್ಪುಗಳನ್ನು ಗಮನಿಸುತ್ತೇವೆ. ನಂತರ ಶಿಫಾರಸು ಮಾಡುತ್ತೇವೆ ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಮತ್ತೊಂದು ಮಹಿಳಾ ಪೊಲೀಸ್ ಠಾಣೆಗೆ ಬೇಡಿಕೆ ಇದೆ. ಈ ಕುರಿತು ಚರ್ಚಿಸಲಾಗುವುದು. ಶೀಘ್ರದಲ್ಲೇ 16000 ಪೊಲೀಸ್ ಹುದ್ದೆ ಭರ್ತಿ ಮಾಡಲಾಗುವುದು ಎಂದರು.</p>.<p>ಶಾಸಕ ಪರಣ್ಣ ಮುನವಳ್ಳಿ ಅವರಿಗೆ ಸಚಿವ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿಗಳ ಬಳಿ ಮಾತನಾಡುವುದಾಗಿ ಹೇಳಿದರು.</p>.<p>ಸಂಸದ ಸಂಗಣ್ಣ ಕರಡಿ, ಶಾಸಕ ಪರಣ್ಣ ಮುನವಳ್ಳಿ, ತುಂಗಭದ್ರಾ ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಪ್ರಮುಖರಾದ ಗಿರೇಗೌಡ, ಸಿದ್ದರಾಮಸ್ವಾಮಿ, ಸಾಗರ್ ಮುನವಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>