ಕೊಪ್ಪಳ: ಯಲಬುರ್ಗಾ ತಾಲ್ಲೂಕಿನ ಸಂಕನೂರು ಬಳಿ ಶನಿವಾರ ರಾತ್ರಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ಕನೇ ಮಹಿಳೆಯ ಮೃತದೇಹ ಭಾನುವಾರ ಮಧ್ಯಾಹ್ನ ಪತ್ತೆಯಾಯಿತು.
ರೇಖಾ ಸಿದ್ದಯ್ಯ ಪೊಲೀಸ್ ಪಾಟೀಲ (40) ಮೃತಪಟ್ಟವರು. ಬೆಳಿಗ್ಗೆ ಪತ್ತೆಯಾಗಿದ್ದ ಸಂಕನೂರು ಗ್ರಾಮದ ಗಿರಿಜಾ ಕಲ್ಲನಗೌಡ ಪೊಲೀಸ್ ಪಾಟೀಲ (28), ಭುವನೇಶ್ವರಿ ಶಾಂತವೀರಯ್ಯ ಪೊಲೀಸ್ ಪಾಟೀಲ (32) ಹಾಗೂ ವೀಣಾ ಬಸವರಾಜ ಪೊಲೀಸ್ ಪಾಟೀಲ (22) ಮೃತದೇಹಗಳ ಅಂತಿಮ ಸಂಸ್ಕಾರ ಗ್ರಾಮದಲ್ಲಿ ನೆರವೇರಿತು.
ಅಗ್ನಿಶಾಮಕ ದಳದ ಸಿಬ್ಬಂದಿ ತಡರಾತ್ರಿ ತನಕ ಕಾರ್ಯಾಚರಣೆ ನಡೆಸಿದರು. ಮಳೆ ಮತ್ತು ಬೆಳಕಿನ ಕೊರತೆಯ ಕಾರಣದಿಂದ ಕಾರ್ಯಾಚರಣೆ ಸುಲಭವಾಗಿ ಸಾಧ್ಯವಾಗಲಿಲ್ಲ. ಮಳೆಯ ನಡುವೆಯೇ ಸ್ಥಳೀಯರು, ರಕ್ಷಣಾ ಸಿಬ್ಬಂದಿ ನಾಪತ್ತೆಯಾದವರ ಶೋಧಕ್ಕೆ ಕೈ ಜೋಡಿಸಿದ್ದರು.