<p><strong>ಗಂಗಾವತಿ: </strong>ಗಂಗಾವತಿ ತಾಲ್ಲೂಕಿನಲ್ಲಿ ಒಂದೇ ದಿನ ಮೂರು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿವೆ.</p>.<p>ಗಂಗಾವತಿ ವಕೀಲಗೇಟ್ ಬಳಿಯ ನಿವಾಸಿ 3 ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದೆ. ಜೂ.9 ರಂದು ಮುಂಬೈನಿಂದ ಪಾಲಕರೊಂದಿಗೆ ಮಗು ಆಗಮಿಸಿತ್ತು.</p>.<p>ಅನಾರೋಗ್ಯದ ಹಿನ್ನೆಲೆಯಲ್ಲಿ ಉಪವಿಭಾಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದಾಗ ಕೋವಿಡ್-19 ಇರುವುದು ಪತ್ತೆಯಾಗಿದೆ.<br />ತಂದೆ, ತಾಯಿಯ ಗಂಟಲು ದ್ರವವನ್ನು ಪಡೆದಿರುವ ವೈದ್ಯರ ತಂಡ ಪರೀಕ್ಷೆಗೆ ರವಾನಿಸಿದೆ. ಮಗುವನ್ನು ಕೊಪ್ಪಳದ ಐಸೋಲೇಶನ್ ವಾರ್ಡಗೆ ಶಿಫ್ಟ್ ಮಾಡಲಾಗಿದೆ.ನಿವಾಸದ ಸ್ಥಳಕ್ಕೆ ದೌಡಾಯಿಸಿದ ನಗರಸಭೆ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ದಾರೆ.</p>.<p>ತಾಲ್ಲೂಕಿನ ಮರಳಿಯಲ್ಲಿಯೂ ದಂಪತಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, 53 ವರ್ಷದ ಪತಿ, 45 ವರ್ಷದ ಪತ್ನಿಗೆ ಕೊರೊನಾ ಸೋಂಕು ತಗುಲಿದೆ.</p>.<p>ಬಳ್ಳಾರಿಯ ಜಿಂದಾಲ್ನಲ್ಲಿ ಕೆಲಸ ಮಾಡುವ ಪುತ್ರನಿಂದ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತಾಲ್ಲೂಕಾಡಳಿತದ ಅಧಿಕಾರಿಗಳ ತಂಡ ಭೇಟಿ ನೀಡಿದ್ದಾರೆ.</p>.<p>ನಗರದ ವಕೀಲ್ ಗೇಟ್ ಮತ್ತು ಮರಳಿ ಸೀಲ್ಡೌನ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>ಗಂಗಾವತಿ ತಾಲ್ಲೂಕಿನಲ್ಲಿ ಒಂದೇ ದಿನ ಮೂರು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿವೆ.</p>.<p>ಗಂಗಾವತಿ ವಕೀಲಗೇಟ್ ಬಳಿಯ ನಿವಾಸಿ 3 ವರ್ಷದ ಮಗುವಿಗೆ ಕೊರೊನಾ ಸೋಂಕು ತಗುಲಿದೆ. ಜೂ.9 ರಂದು ಮುಂಬೈನಿಂದ ಪಾಲಕರೊಂದಿಗೆ ಮಗು ಆಗಮಿಸಿತ್ತು.</p>.<p>ಅನಾರೋಗ್ಯದ ಹಿನ್ನೆಲೆಯಲ್ಲಿ ಉಪವಿಭಾಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದಾಗ ಕೋವಿಡ್-19 ಇರುವುದು ಪತ್ತೆಯಾಗಿದೆ.<br />ತಂದೆ, ತಾಯಿಯ ಗಂಟಲು ದ್ರವವನ್ನು ಪಡೆದಿರುವ ವೈದ್ಯರ ತಂಡ ಪರೀಕ್ಷೆಗೆ ರವಾನಿಸಿದೆ. ಮಗುವನ್ನು ಕೊಪ್ಪಳದ ಐಸೋಲೇಶನ್ ವಾರ್ಡಗೆ ಶಿಫ್ಟ್ ಮಾಡಲಾಗಿದೆ.ನಿವಾಸದ ಸ್ಥಳಕ್ಕೆ ದೌಡಾಯಿಸಿದ ನಗರಸಭೆ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದ್ದಾರೆ.</p>.<p>ತಾಲ್ಲೂಕಿನ ಮರಳಿಯಲ್ಲಿಯೂ ದಂಪತಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, 53 ವರ್ಷದ ಪತಿ, 45 ವರ್ಷದ ಪತ್ನಿಗೆ ಕೊರೊನಾ ಸೋಂಕು ತಗುಲಿದೆ.</p>.<p>ಬಳ್ಳಾರಿಯ ಜಿಂದಾಲ್ನಲ್ಲಿ ಕೆಲಸ ಮಾಡುವ ಪುತ್ರನಿಂದ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ತಾಲ್ಲೂಕಾಡಳಿತದ ಅಧಿಕಾರಿಗಳ ತಂಡ ಭೇಟಿ ನೀಡಿದ್ದಾರೆ.</p>.<p>ನಗರದ ವಕೀಲ್ ಗೇಟ್ ಮತ್ತು ಮರಳಿ ಸೀಲ್ಡೌನ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>