<p><strong>ಅಳವಂಡಿ:</strong> ‘ತಂಬಾಕು ಸೇವನೆಯಿಂದ ಮಾರಣಾಂತಿಕ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಬೇಕಾಗುತ್ತದೆ. ಮಹಿಳೆಯರು ತಂಬಾಕು ಸೇವನೆ ಮಾಡುವುದರಿಂದ ಹುಟ್ಟುವ ಮಗು ಕೂಡ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ. ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು’ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಸಾಮಾಜಿಕ ಮೇಲ್ವಿಚಾರಕಿ ಸರಸ್ವತಿ ಹೇಳಿದರು.</p>.<p>ಸಮೀಪದ ಬೆಟಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ತಂಬಾಕು ಮುಕ್ತ ಅಭಿಯಾನ ಅಂಗವಾಗಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಕ ಮರ್ದಾನಲಿ ಗಡಾದ ಮಾತನಾಡಿ, ‘ಸದೃಢ ಸಮಾಜ ಕಟ್ಟುವಲ್ಲಿ ಯುವಕರ ಪಾತ್ರ ಅತಿ ಮುಖ್ಯ. ಆದರೆ ಇಂದಿನ ಯುವಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಧೂಮಪಾನ, ಮದ್ಯಪಾನಂತಹ ದುಶ್ಚಟಗಳ ದಾಸರಾಗಿ ತಮ್ಮ ಸುಂದರ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಶಿಕ್ಷಕ ಗಿರಿಯಪ್ಪ ಹಾರನಹಳ್ಳಿ ಮಾತನಾಡಿದರು. ಶಿಕ್ಷಕರಾದ ರವಿಕಿರಣ್ ಟಿಕಾರೆ, ಪ್ರಕಾಶರೆಡ್ಡಿ ಗೋವಿಂದರೆಡ್ಡಿ, ಶಾಂತಂವೀರಯ್ಯ ಕಳ್ಳಿಮಠ, ಸೋಮಣ್ಣ ತಳಕಲ್ ಪರಶುರಾಮ ಯಡವಟ್ಟಿ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳವಂಡಿ:</strong> ‘ತಂಬಾಕು ಸೇವನೆಯಿಂದ ಮಾರಣಾಂತಿಕ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಬೇಕಾಗುತ್ತದೆ. ಮಹಿಳೆಯರು ತಂಬಾಕು ಸೇವನೆ ಮಾಡುವುದರಿಂದ ಹುಟ್ಟುವ ಮಗು ಕೂಡ ಆರೋಗ್ಯ ಸಮಸ್ಯೆ ಎದುರಿಸಬೇಕಾಗುತ್ತದೆ. ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು’ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಸಾಮಾಜಿಕ ಮೇಲ್ವಿಚಾರಕಿ ಸರಸ್ವತಿ ಹೇಳಿದರು.</p>.<p>ಸಮೀಪದ ಬೆಟಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ತಂಬಾಕು ಮುಕ್ತ ಅಭಿಯಾನ ಅಂಗವಾಗಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಿಕ್ಷಕ ಮರ್ದಾನಲಿ ಗಡಾದ ಮಾತನಾಡಿ, ‘ಸದೃಢ ಸಮಾಜ ಕಟ್ಟುವಲ್ಲಿ ಯುವಕರ ಪಾತ್ರ ಅತಿ ಮುಖ್ಯ. ಆದರೆ ಇಂದಿನ ಯುವಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ಧೂಮಪಾನ, ಮದ್ಯಪಾನಂತಹ ದುಶ್ಚಟಗಳ ದಾಸರಾಗಿ ತಮ್ಮ ಸುಂದರ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>ಶಿಕ್ಷಕ ಗಿರಿಯಪ್ಪ ಹಾರನಹಳ್ಳಿ ಮಾತನಾಡಿದರು. ಶಿಕ್ಷಕರಾದ ರವಿಕಿರಣ್ ಟಿಕಾರೆ, ಪ್ರಕಾಶರೆಡ್ಡಿ ಗೋವಿಂದರೆಡ್ಡಿ, ಶಾಂತಂವೀರಯ್ಯ ಕಳ್ಳಿಮಠ, ಸೋಮಣ್ಣ ತಳಕಲ್ ಪರಶುರಾಮ ಯಡವಟ್ಟಿ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>