ಶೌಚಾಲಯ ಸಮಸ್ಯೆ ತುರ್ತಾಗಿ ಪರಿಹರಿಸಲು ಒತ್ತಾಯ
ಕುಷ್ಟಗಿ ಪಟ್ಟಣದ ಬಾಲಕಿಯರ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಸರ್ಕಾರ ತುರ್ತಾಗಿ ಶೌಚಾಲಯ ಮತ್ತು ಕೊಠಡಿಗಳನ್ನು ನಿರ್ಮಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಎಐಡಿಎಸ್ಒ ಸಂಘಟನೆಯ ಜಿಲ್ಲಾ ಸಂಚಾಲಕ ಗಂಗರಾಜ ಅಳ್ಳಳ್ಳಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ವರದಿ ಉಲ್ಲೇಖಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ‘ಸರ್ಕಾರದಿಂದ ವಿವಿಧ ಯೋಜನೆಗಳಡಿ ಸಾಕಷ್ಟು ಅವಕಾಶಗಳಿದ್ದರೂ ಶೌಚಾಲಯ ನಿರ್ಮಿಸಲು ಸಾಧ್ಯವಾಗಿಲ್ಲ. ಇದರಿಂದ ವಿದ್ಯಾರ್ಥಿನಿಯರ ಓದಿಗೂ ತೊಂದರೆಯಾಗುತ್ತಿದೆ. ಬಡವರ ಮಕ್ಕಳೇ ಹೆಚ್ಚಿರುವ ಕಾಲೇಜಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಶಾಸಕರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ತುರ್ತಾಗಿ ಸಮಸ್ಯೆ ಪರಿಹರಿಸದೇ ಹೋದರೆ ಮುಂಬರುವ ದಿನಗಳಲ್ಲಿ ಹೋರಾಟ ಮಾಡಬೇಕಾಗುತ್ತದೆ’ ಎಂದು ಹೇಳಿದ್ದಾರೆ.