<p><strong>ತಾವರಗೇರಾ:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬುಧವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ ಕಾರಣ ಪಟ್ಟಣದ ಬಸ್ ನಿಲ್ದಾಣ ಜನರಿಲ್ಲದೆ ಬಿಕೋ ಎನ್ನುತ್ತಿತ್ತು.</p>.<p>ಜನ ದುಪ್ಪಟ್ಟು ದರ ನೀಡಿ ಖಾಸಗಿ ವಾಹನಗಳಲ್ಲಿ ಪ್ರಯಾಣಿಸಿದರು.</p>.<p>ತಾವರಗೇರಾ ಪಟ್ಟಣದಿಂದ ಮುದಗಲ್, ಲಿಂಗಸುಗೂರು, ಸಿಂಧನೂರು, ಮಸ್ಕಿ, ಕುಷ್ಟಗಿ, ಗಂಗಾವತಿ, ಕನಕಗಿರಿ ಸೇರಿ ವಿವಿಧ ಕಡೆ ಪ್ರಯಾಣಿಕರು ಖಾಸಗಿ ವಾಹನಗಳಲ್ಲಿ ತೆರಳಿದರು.</p>.<p>ಮುಷ್ಕರದ ಕುರಿತು ಮಾಹಿತಿ ಇಲ್ಲದ ಕಾರಣ ಗ್ರಾಮೀಣ ಭಾಗದ ಜನ ಪರದಾಡಿದರು.</p>.<p>ಬಸ್ ನಿಲ್ದಾಣದಲ್ಲಿ ಅಂಗಡಿ–ಮುಂಗಟ್ಟುಗಳ ಕಡೆ ಗ್ರಾಹಕರು ಸುಳಿಯಲಿಲ್ಲ.</p>.<p>‘ವ್ಯಾಪಾರ ಎಂದಿನಂತಿಲ್ಲದ ಕಾರಣ ನಷ್ಟವಾಗಿದೆ’ ಎಂದು ವ್ಯಾಪಾರಿ ಲಕ್ಷ್ಮಣಗೌಡ ಪುಂಡಗೌಡ್ರು ತಿಳಿಸಿದರು.</p>.<p>‘ನಾವು ಬಂದ್ ಕಾರಣ ದರ ಹೆಚ್ಚಳ ಮಾಡುವುದಿಲ್ಲ. ಸಾಮಾನ್ಯ ದಿನಗಳಲ್ಲಿ ಇದ್ದ ದರವನ್ನೇ ಪಡೆಯುತಿದ್ದೇವೆ’ ಎಂದು ಖಾಸಗಿ ವಾಹನ ಚಾಲಕ ವಿರೇಶ ಮನ್ನಾಪೂರ ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ತಾವರಗೇರಾ:</strong> ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಬುಧವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ ಕಾರಣ ಪಟ್ಟಣದ ಬಸ್ ನಿಲ್ದಾಣ ಜನರಿಲ್ಲದೆ ಬಿಕೋ ಎನ್ನುತ್ತಿತ್ತು.</p>.<p>ಜನ ದುಪ್ಪಟ್ಟು ದರ ನೀಡಿ ಖಾಸಗಿ ವಾಹನಗಳಲ್ಲಿ ಪ್ರಯಾಣಿಸಿದರು.</p>.<p>ತಾವರಗೇರಾ ಪಟ್ಟಣದಿಂದ ಮುದಗಲ್, ಲಿಂಗಸುಗೂರು, ಸಿಂಧನೂರು, ಮಸ್ಕಿ, ಕುಷ್ಟಗಿ, ಗಂಗಾವತಿ, ಕನಕಗಿರಿ ಸೇರಿ ವಿವಿಧ ಕಡೆ ಪ್ರಯಾಣಿಕರು ಖಾಸಗಿ ವಾಹನಗಳಲ್ಲಿ ತೆರಳಿದರು.</p>.<p>ಮುಷ್ಕರದ ಕುರಿತು ಮಾಹಿತಿ ಇಲ್ಲದ ಕಾರಣ ಗ್ರಾಮೀಣ ಭಾಗದ ಜನ ಪರದಾಡಿದರು.</p>.<p>ಬಸ್ ನಿಲ್ದಾಣದಲ್ಲಿ ಅಂಗಡಿ–ಮುಂಗಟ್ಟುಗಳ ಕಡೆ ಗ್ರಾಹಕರು ಸುಳಿಯಲಿಲ್ಲ.</p>.<p>‘ವ್ಯಾಪಾರ ಎಂದಿನಂತಿಲ್ಲದ ಕಾರಣ ನಷ್ಟವಾಗಿದೆ’ ಎಂದು ವ್ಯಾಪಾರಿ ಲಕ್ಷ್ಮಣಗೌಡ ಪುಂಡಗೌಡ್ರು ತಿಳಿಸಿದರು.</p>.<p>‘ನಾವು ಬಂದ್ ಕಾರಣ ದರ ಹೆಚ್ಚಳ ಮಾಡುವುದಿಲ್ಲ. ಸಾಮಾನ್ಯ ದಿನಗಳಲ್ಲಿ ಇದ್ದ ದರವನ್ನೇ ಪಡೆಯುತಿದ್ದೇವೆ’ ಎಂದು ಖಾಸಗಿ ವಾಹನ ಚಾಲಕ ವಿರೇಶ ಮನ್ನಾಪೂರ ಹೇಳಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>