ಕನಕಗಿರಿ: ‘ಪ್ರತಿಯೊಂದು ಗ್ರಾಮಗಳಲ್ಲಿ ಸಸಿಗಳನ್ನು ನೆಟ್ಟು ನಿರಂತವಾಗಿ ಪೋಷಣೆ ಮಾಡಿದರೆ ರಾಜ್ಯ ಹಸಿರು ಕರ್ನಾಟಕವಾಗಲಿದೆ‘ ಎಂದು ಸಾಹಿತಿ ಅಲ್ಲಾಗಿರಿರಾಜ ತಿಳಿಸಿದರು.
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಇಲ್ಲಿನ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಈಚೆಗೆ ನಡೆದ ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಬಡವರು, ಬೀದಿ ಬದಿ ವ್ಯಾಪಾರಸ್ಥರು, ದುರ್ಬಲ ವರ್ಗದವರ ಏಳಿಗೆಗೆ ಕಲ್ಯಾಣ ಕರ್ನಾಟಕ ಸಂಘ ಶ್ರಮಿಸುತ್ತಿರುವುದು ಶ್ಲಾಘನೀಯ‘ ಎಂದರು.