<p><strong>ಅಳವಂಡಿ</strong>: ತುಂಗಭದ್ರಾ ಜಲಾಶಯದಲ್ಲಿ ನೀರು ಕಡಿಮೆ ಆದಾಗ ಹಿನ್ನೀರು ಪ್ರದೇಶದಲ್ಲಿ ಬಿತ್ತನೆ ಮಾಡಿ ಬೆಳೆ ಬೆಳೆಯುವುದು ವಾಡಿಕೆ. ಆದ್ದರಿಂದ ತುಂಗಭದ್ರಾ ನದಿ ತಟದಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದೆ.</p>.<p>ತುಂಗಭದ್ರಾ ಜಲಾಶಯದ ನೀರು ನಿಧಾನವಾಗಿ ಖಾಲಿಯಾಗುತ್ತಿದ್ದಂತೆ ಜಲಾಶಯದ ಹಿನ್ನೀರಿನ ಫಲವತ್ತಾದ ಪ್ರದೇಶದಲ್ಲಿ ತೇವಾಂಶ ಕಡಿಮೆಯಾಗುತ್ತದೆ. ಬಳಿಕ ರೈತರು ಈ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಆರಂಭಿಸುತ್ತಾರೆ.</p>.<p>ತುಂಗಭದ್ರಾ ನದಿ ತಟದಲ್ಲಿರುವ ಗ್ರಾಮಗಳಾದ ಕೇಸಲಾಪುರ, ನಿಲೋಗಿಪುರ, ಹಲವಾಗಲಿ, ಬೋಚನಹಳ್ಳಿ, ತಿಗರಿ, ನೀರಲಗಿ, ಕಾತರಕಿ, ಮತ್ತೂರ, ಹನಕುಂಟಿ ಗ್ರಾಮಗಳ ರೈತರು ಸೂರ್ಯಕಾಂತಿ, ಅಲಸಂದಿ, ಕಡಲೆ, ಉದ್ದು ಬಿತ್ತನೆಯ ಲ್ಲಿ ತೊಡಗಿದ್ದಾರೆ.</p>.<p>ಪ್ರಸಕ್ತ ಸಾಲಿನಲ್ಲಿ ತುಂಗಭದ್ರಾ ಅಣೆಕಟ್ಟು ಸಂಪೂರ್ಣವಾಗಿ ಭರ್ತಿಯಾಗಿದ್ದ ಕಾರಣ ಹಿನ್ನೀರು ಪ್ರದೇಶದ ಜಮೀನುಗಳು ಸಂಪೂರ್ಣವಾಗಿ ಮುಳುಗಡೆಯಾಗಿದ್ದವು. ನಂತರ ಜಲಾಶಯದಿಂದ ಎಡದಂಡೆ ಹಾಗೂ ಬಲದಂಡೆ ಕಾಲುವೆಗೆ ನೀರು ಹರಿಸಲಾಯಿತು. ಬಳಿಕ ಜಮೀನುಗಳಲ್ಲಿ ನೀರು ಖಾಲಿಯಾಯಿತು.</p>.<p>ಹಿನ್ನೀರು ಪ್ರದೇಶದ ಸಾವಿರಾರು ಎಕರೆ ಜಮೀನುಗಳಲ್ಲಿ ರೈತರು ಬಿತ್ತನೆ ಕಾರ್ಯ ನಡೆಸಿ ಉತ್ತಮ ಫಸಲು ಪಡೆಯುತ್ತಿದ್ದಾರೆ. ಈ ಜಮೀನು ಫಲವತ್ತತೆಯಿಂದ ಕೂಡಿರುವುದರಿಂದ ರೈತರಿಗೆ ಖರ್ಚು ಕೂಡ ಕಡಿಮೆಯಾಗುತ್ತದೆ. ಕಡಿಮೆ ಖರ್ಚಿನಲ್ಲಿ ಉತ್ತಮ ಬೆಳೆ ಪಡೆಯುತ್ತಿದ್ದಾರೆ. ಇದರಿಂದ ರೈತರ ಆರ್ಥಿಕ ಪರಿಸ್ಥಿತಿ ಕೊಂಚ ಸುಧಾರಿಸುತ್ತಿದೆ. ಪ್ರಸಕ್ತ ವರ್ಷವೂ ಈ ಭಾಗದ ರೈತರು ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳವಂಡಿ</strong>: ತುಂಗಭದ್ರಾ ಜಲಾಶಯದಲ್ಲಿ ನೀರು ಕಡಿಮೆ ಆದಾಗ ಹಿನ್ನೀರು ಪ್ರದೇಶದಲ್ಲಿ ಬಿತ್ತನೆ ಮಾಡಿ ಬೆಳೆ ಬೆಳೆಯುವುದು ವಾಡಿಕೆ. ಆದ್ದರಿಂದ ತುಂಗಭದ್ರಾ ನದಿ ತಟದಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದೆ.</p>.<p>ತುಂಗಭದ್ರಾ ಜಲಾಶಯದ ನೀರು ನಿಧಾನವಾಗಿ ಖಾಲಿಯಾಗುತ್ತಿದ್ದಂತೆ ಜಲಾಶಯದ ಹಿನ್ನೀರಿನ ಫಲವತ್ತಾದ ಪ್ರದೇಶದಲ್ಲಿ ತೇವಾಂಶ ಕಡಿಮೆಯಾಗುತ್ತದೆ. ಬಳಿಕ ರೈತರು ಈ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಆರಂಭಿಸುತ್ತಾರೆ.</p>.<p>ತುಂಗಭದ್ರಾ ನದಿ ತಟದಲ್ಲಿರುವ ಗ್ರಾಮಗಳಾದ ಕೇಸಲಾಪುರ, ನಿಲೋಗಿಪುರ, ಹಲವಾಗಲಿ, ಬೋಚನಹಳ್ಳಿ, ತಿಗರಿ, ನೀರಲಗಿ, ಕಾತರಕಿ, ಮತ್ತೂರ, ಹನಕುಂಟಿ ಗ್ರಾಮಗಳ ರೈತರು ಸೂರ್ಯಕಾಂತಿ, ಅಲಸಂದಿ, ಕಡಲೆ, ಉದ್ದು ಬಿತ್ತನೆಯ ಲ್ಲಿ ತೊಡಗಿದ್ದಾರೆ.</p>.<p>ಪ್ರಸಕ್ತ ಸಾಲಿನಲ್ಲಿ ತುಂಗಭದ್ರಾ ಅಣೆಕಟ್ಟು ಸಂಪೂರ್ಣವಾಗಿ ಭರ್ತಿಯಾಗಿದ್ದ ಕಾರಣ ಹಿನ್ನೀರು ಪ್ರದೇಶದ ಜಮೀನುಗಳು ಸಂಪೂರ್ಣವಾಗಿ ಮುಳುಗಡೆಯಾಗಿದ್ದವು. ನಂತರ ಜಲಾಶಯದಿಂದ ಎಡದಂಡೆ ಹಾಗೂ ಬಲದಂಡೆ ಕಾಲುವೆಗೆ ನೀರು ಹರಿಸಲಾಯಿತು. ಬಳಿಕ ಜಮೀನುಗಳಲ್ಲಿ ನೀರು ಖಾಲಿಯಾಯಿತು.</p>.<p>ಹಿನ್ನೀರು ಪ್ರದೇಶದ ಸಾವಿರಾರು ಎಕರೆ ಜಮೀನುಗಳಲ್ಲಿ ರೈತರು ಬಿತ್ತನೆ ಕಾರ್ಯ ನಡೆಸಿ ಉತ್ತಮ ಫಸಲು ಪಡೆಯುತ್ತಿದ್ದಾರೆ. ಈ ಜಮೀನು ಫಲವತ್ತತೆಯಿಂದ ಕೂಡಿರುವುದರಿಂದ ರೈತರಿಗೆ ಖರ್ಚು ಕೂಡ ಕಡಿಮೆಯಾಗುತ್ತದೆ. ಕಡಿಮೆ ಖರ್ಚಿನಲ್ಲಿ ಉತ್ತಮ ಬೆಳೆ ಪಡೆಯುತ್ತಿದ್ದಾರೆ. ಇದರಿಂದ ರೈತರ ಆರ್ಥಿಕ ಪರಿಸ್ಥಿತಿ ಕೊಂಚ ಸುಧಾರಿಸುತ್ತಿದೆ. ಪ್ರಸಕ್ತ ವರ್ಷವೂ ಈ ಭಾಗದ ರೈತರು ಉತ್ತಮ ಫಸಲಿನ ನಿರೀಕ್ಷೆಯಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>