<p><strong>ಗಂಗಾವತಿ:</strong> ತುಂಗಾಭದ್ರ ಜಲಾಶಯದಿಂದ ನದಿಗೆ ಶುಕ್ರವಾರ 65 ಸಾವಿರ ಕ್ಯುಸೆಕ್ ನೀರು ಹರಿಸಲಾಗಿದ್ದು, 64 ಸಾಲು ಕಂಬಗಳ ಮಂಟಪ ಭಾಗಶಃ ಮುಳುಗಡೆ ಆಗಿದೆ. ಅಲ್ಲದೆ ತಾಲ್ಲೂಕಿನ ವಿರೂಪಾಪುರಗಡ್ಡೆ, ನವವೃಂದಾವನಗಡ್ಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಆನೆಗೊಂದಿ ಭಾಗದ ಕೆಲ ದೇವಾಲಯ, ಮಂಟಪಗಳಿಗೆ ನೀರು ನುಗ್ಗಿದೆ.</p>.<p>ಜಲಾಶಯದ ಒಳಹರಿವು ಹೆಚ್ಚಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗಿದೆ. ಗಂಗಾವತಿ-ಕಂಪ್ಲಿ ತಾಲ್ಲೂಕಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕೆಳ ಭಾಗದಲ್ಲಿ ನೀರು ಹರಿಯುತ್ತಿದ್ದು, ಮುಳುಗಡೆ ಹಂತದಲ್ಲಿದೆ. ವಾಹನ ಸಂಚಾರಕ್ಕೆ ತೊಂದರೆಯಾಗಿಲ್ಲ. ಕಳೆದ 2 ದಿನಗಳಿಂದ ನದಿಗೆ ನೀರು ಬಿಡುವ ಬಗ್ಗೆ ತುಂಗಾಭದ್ರಾ ಜಲಾಶಯದಿಂದ ಎಚ್ಚರಿಕೆ ಸಂದೇಶ ಬಂದಿದೆ. ಹೀಗಾಗಿ ಪೊಲೀಸ್ ಇಲಾಖೆ, ತಾಲ್ಲೂಕು ಆಡಳಿತ ನದಿಪಾತ್ರದ ಸ್ಥಳಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.</p>.<p>ಕಳೆದ ವರ್ಷ ತುಂಗಾಭದ್ರ ಜಲಾಶಯದ 19ನೇ ಕ್ರಸ್ಟ್ ಗೇಟ್ ಒಡೆದು ಅಪಾರ ನೀರು ಹೊರಹೋಗಿ, ಜಲಾಶಯಕ್ಕೆ ಧಕ್ಕೆಯಾಗುವ ಭೀತಿ ಎದುರಾಗಿತ್ತು. ತಜ್ಞರ ಕಾರ್ಯದಿಂದ ತಾತ್ಕಾಲಿಕ ಕ್ರಸ್ಟ್ ಗೇಟ್ ಅಳವಡಿಸಿ, ಅಪಾಯ ತಪ್ಪಿಸಲಾಗಿತ್ತು.</p>.<p>ನಂತರ ಜಲಾಶಯದ ಸುರಕ್ಷತೆ ಪರಿಶೀಲಿಸಿದಾಗ ಬಹುತೇಕ ಕ್ರಸ್ಟ್ಗೇಟ್ಗಳು ಶಿಥಿಲವಾದ ಸ್ಥಿತಿಯಲ್ಲಿದ್ದು, ಅವುಗಳನ್ನು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆದು, ಮುಂಬರುವ ವರ್ಷದಲ್ಲಿ ಎಲ್ಲ ಕ್ರಸ್ಟ್ಗೇಟ್ಗಳನ್ನು ಬದಲಾಯಿಸಲು ಈ ಬಾರಿ ಜಲಾಶಯದಲ್ಲಿ 80 ಟಿಎಂಸಿ ಅಡಿಯಷ್ಟು ನೀರು ಸಂಗ್ರಹಿಸಿ, ಉಳಿದ ನೀರು ಹೊರಬಿಡಲು ತುಂಗಾಭದ್ರಾ ಜಲಾಶಯದ ಆಡಳಿತ ಮಂಡಳಿ ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತುಂಗಾಭದ್ರ ಜಲಾಶಯದಿಂದ ನದಿಗೆ ಶುಕ್ರವಾರ 65 ಸಾವಿರ ಕ್ಯುಸೆಕ್ ನೀರು ಹರಿಸಲಾಗಿದ್ದು, 64 ಸಾಲು ಕಂಬಗಳ ಮಂಟಪ ಭಾಗಶಃ ಮುಳುಗಡೆ ಆಗಿದೆ. ಅಲ್ಲದೆ ತಾಲ್ಲೂಕಿನ ವಿರೂಪಾಪುರಗಡ್ಡೆ, ನವವೃಂದಾವನಗಡ್ಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಆನೆಗೊಂದಿ ಭಾಗದ ಕೆಲ ದೇವಾಲಯ, ಮಂಟಪಗಳಿಗೆ ನೀರು ನುಗ್ಗಿದೆ.</p>.<p>ಜಲಾಶಯದ ಒಳಹರಿವು ಹೆಚ್ಚಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಬಿಡಲಾಗಿದೆ. ಗಂಗಾವತಿ-ಕಂಪ್ಲಿ ತಾಲ್ಲೂಕಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕೆಳ ಭಾಗದಲ್ಲಿ ನೀರು ಹರಿಯುತ್ತಿದ್ದು, ಮುಳುಗಡೆ ಹಂತದಲ್ಲಿದೆ. ವಾಹನ ಸಂಚಾರಕ್ಕೆ ತೊಂದರೆಯಾಗಿಲ್ಲ. ಕಳೆದ 2 ದಿನಗಳಿಂದ ನದಿಗೆ ನೀರು ಬಿಡುವ ಬಗ್ಗೆ ತುಂಗಾಭದ್ರಾ ಜಲಾಶಯದಿಂದ ಎಚ್ಚರಿಕೆ ಸಂದೇಶ ಬಂದಿದೆ. ಹೀಗಾಗಿ ಪೊಲೀಸ್ ಇಲಾಖೆ, ತಾಲ್ಲೂಕು ಆಡಳಿತ ನದಿಪಾತ್ರದ ಸ್ಥಳಗಳಿಗೆ ತೆರಳದಂತೆ ಸಾರ್ವಜನಿಕರಿಗೆ ಸೂಚನೆ ನೀಡಿದೆ.</p>.<p>ಕಳೆದ ವರ್ಷ ತುಂಗಾಭದ್ರ ಜಲಾಶಯದ 19ನೇ ಕ್ರಸ್ಟ್ ಗೇಟ್ ಒಡೆದು ಅಪಾರ ನೀರು ಹೊರಹೋಗಿ, ಜಲಾಶಯಕ್ಕೆ ಧಕ್ಕೆಯಾಗುವ ಭೀತಿ ಎದುರಾಗಿತ್ತು. ತಜ್ಞರ ಕಾರ್ಯದಿಂದ ತಾತ್ಕಾಲಿಕ ಕ್ರಸ್ಟ್ ಗೇಟ್ ಅಳವಡಿಸಿ, ಅಪಾಯ ತಪ್ಪಿಸಲಾಗಿತ್ತು.</p>.<p>ನಂತರ ಜಲಾಶಯದ ಸುರಕ್ಷತೆ ಪರಿಶೀಲಿಸಿದಾಗ ಬಹುತೇಕ ಕ್ರಸ್ಟ್ಗೇಟ್ಗಳು ಶಿಥಿಲವಾದ ಸ್ಥಿತಿಯಲ್ಲಿದ್ದು, ಅವುಗಳನ್ನು ಬದಲಾಯಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆದು, ಮುಂಬರುವ ವರ್ಷದಲ್ಲಿ ಎಲ್ಲ ಕ್ರಸ್ಟ್ಗೇಟ್ಗಳನ್ನು ಬದಲಾಯಿಸಲು ಈ ಬಾರಿ ಜಲಾಶಯದಲ್ಲಿ 80 ಟಿಎಂಸಿ ಅಡಿಯಷ್ಟು ನೀರು ಸಂಗ್ರಹಿಸಿ, ಉಳಿದ ನೀರು ಹೊರಬಿಡಲು ತುಂಗಾಭದ್ರಾ ಜಲಾಶಯದ ಆಡಳಿತ ಮಂಡಳಿ ನಿರ್ಧರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>