ಶುಕ್ರವಾರ, 14 ನವೆಂಬರ್ 2025
×
ADVERTISEMENT
ADVERTISEMENT

ಕುಸಿದ ತುಂಗಭದ್ರಾ ಜಲಾಶಯದ ನೀರು ಸಂಗ್ರಹಣಾ ಸಾಮರ್ಥ್ಯ: ರೈತರಿಗೆ ಸಂಕಷ್ಟ

ಜೂನ್‌ನಿಂದ ನದಿಗೆ ಹರಿದ 249.586 ಟಿಎಂಸಿ ಅಡಿ ನೀರು, ಇಂದು ಮಹತ್ವದ ಐಸಿಸಿ ಸಭೆ
Published : 14 ನವೆಂಬರ್ 2025, 6:11 IST
Last Updated : 14 ನವೆಂಬರ್ 2025, 6:11 IST
ಫಾಲೋ ಮಾಡಿ
Comments
ಎರಡನೇ ಬೆಳೆಗೆ ನೀರು ಬಿಡದಿದ್ದರೆ ನಾವು ಮಣ್ಣು ತಿನ್ನಬೇಕಾಗುತ್ತದೆ. ಇಷ್ಟು ದಿನ ಕಾಲಹರಣ ಮಾಡಿ ಈಗ ಕ್ರಸ್ಟ್‌ಗೇಟ್ ಅಳವಡಿಸುವ ಕಾರಣ ನೀರು ಹರಿಸುವುದಿಲ್ಲ ಎನ್ನುವುದು ಸರಿಯೇ?
ಪಾಮಣ್ಣ ನಾಯಕ ಗಂಗಾವತಿಯ ರೈತ
ನೀರು ಬಿಡದಿದ್ದರೆ ಮುತ್ತಿಗೆ: ಶ್ರೀರಾಮುಲು
ಕೊಪ್ಪಳ: ಶುಕ್ರವಾರ ಬೆಂಗಳೂರಿನಲ್ಲಿ ನಡೆಯುವ ತುಂಗಭದ್ರಾ ಜಲಾಶಯದ ಐಸಿಸಿ ಸಲಹಾ ಸಮಿತಿ ಸಭೆಯಲ್ಲಿ ಎರಡನೇ ಬೆಳೆಗೆ ನೀರು ಹರಿಸುವ ತೀರ್ಮಾನ ಕೈಗೊಳ್ಳದಿದ್ದರೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನ. 15ರಂದು ಸಭೆ ನಡೆಸಿ ಹೋರಾಟ ರೂಪಿಸಲಾಗುವುದು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದರು. ಮುನಿರಾಬಾದ್‌ನಲ್ಲಿ ಗುರುವಾರ ನಡೆದ ನಾಲ್ಕೂ ಜಿಲ್ಲೆಗಳ ಬಿಜೆಪಿ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು ‘ನೀರು ಹರಿಸದಿದ್ದರೆ ತುಂಗಭದ್ರಾ ಜಲಾಶಯಕ್ಕೆ ಮುತ್ತಿಗೆ ಹಾಕಿ ನಾವೇ ಜಲಾಶಯಕ್ಕೆ ಹಾರಬೇಕಾಗುತ್ತದೆ. ಈ ಭಾಗದ ರೈತರನ್ನು ಸರ್ಕಾರ ಹಗುರವಾಗಿ ಪರಿಗಣಿಸಬಾರದು’ ಎಂದು ಎಚ್ಚರಿಕೆ ನೀಡಿದರು. ‘ಜಲಾಶಯಕ್ಕೆ ಕ್ರಸ್ಟ್‌ಗೇಟ್‌ ಅಳವಡಿಸುವ ವಿಚಾರದಲ್ಲಿ ₹52 ಕೋಟಿ ಅವ್ಯವಹಾರವಾಗಿದೆ’ ಎಂದೂ ಅವರು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT