<p><strong>ಕುಷ್ಟಗಿ:</strong> ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಮುಲ್ಲಾರ ಓಣಿ ನಿವಾಸಿ ಶಾಮೀದಸಾಬ್ ರಾಜೇಸಾಬ್ ಕಿಡದೂರು ಮತ್ತು ಸಂದೀಪ ನಗರದ ಪರಶುರಾಮ ಹನುಮಂತ ಆಚಾರಿ ಎಂಬುವವರ ವಿರುದ್ಧ ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಆಗಿದ್ದೇನು: ಗಜೇಂದ್ರಗಡ ರಸ್ತೆಯಲ್ಲಿರುವ ಡಾಬಾವೊಂದರ ಬಳಿ ಬೈಕ್ ಮೇಲೆ ಬಂದ ಆರೋಪಿ ಶಾಮೀದ್ಸಾಬ್ ಸಿನಿಮೀಯ ರೀತಿಯಲ್ಲಿ ತಲ್ವಾರ್ ಹಿಡಿದು ಇಳಿಯುತ್ತಾನೆ. ತಲ್ವಾರ್ ಅನ್ನು ಇನ್ನೊಬ್ಬ ಆರೋಪಿ ಪರಶುರಾಮನತ್ತ ತೂರುತ್ತಾನೆ. ಅದನ್ನು ಹಿಡಿದ ಪರಶುರಾಮ, ಸಾರ್ವಜನಿಕವಾಗಿ ಜನರಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ಪ್ರದರ್ಶಿಸುತ್ತಾನೆ. ಈ ದೃಶ್ಯಕ್ಕೆ ಮಹಾಕಾಯ ಎಂಬ ಹಾಡಿನ ಹಿನ್ನೆಲೆ ಸಂಗೀತ ಎಡಿಟ್ ಮಾಡಿ ಅದನ್ನು ಇನ್ಸ್ಟ್ರಾಗ್ರಾಂನಲ್ಲಿ ಹರಿಬಿಡಲಾಗಿತ್ತು. ಈ ದೃಶ್ಯ ಮೊಬೈಲ್ನಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಪೊಲೀಸರು ಸ್ವಯಂ ಪ್ರೇರಣೆಯಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಡಿಯೊ ದೃಶ್ಯವನ್ನು ಅಲ್ತಾಫ್ ಜಾಕೀರಸಾಬ್ ಎಂಬಾತ ಮೊಬೈಲ್ನಲ್ಲಿ ಸೆರೆ ಹಿಡಿದ್ದ ಎಂದು ಆರೋಪಿಗಳು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.</p>.<p>ರೀಲ್ಸ್ ಮಾಡಿ, ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ಕಾನೂನು ಬಾಹಿರವಾಗಿ ವರ್ತಿಸುತ್ತಿದ್ದಾರೆ. ಇದರಿಂದ ಜನರು, ಮಹಿಳೆಯರಿಗೆ ಕಿರಿಕಿರಿಯಾಗುತ್ತಿದ್ದು, ಪೊಲೀಸರು ಅಂಥವರನ್ನು ಪತ್ತೆ ಹಚ್ಚಿ, ಕಠಿಣ ಕ್ರಮಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಪೊಲೀಸರನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ತಲ್ವಾರ್ ಹಿಡಿದು ರೀಲ್ಸ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಮುಲ್ಲಾರ ಓಣಿ ನಿವಾಸಿ ಶಾಮೀದಸಾಬ್ ರಾಜೇಸಾಬ್ ಕಿಡದೂರು ಮತ್ತು ಸಂದೀಪ ನಗರದ ಪರಶುರಾಮ ಹನುಮಂತ ಆಚಾರಿ ಎಂಬುವವರ ವಿರುದ್ಧ ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಆಗಿದ್ದೇನು: ಗಜೇಂದ್ರಗಡ ರಸ್ತೆಯಲ್ಲಿರುವ ಡಾಬಾವೊಂದರ ಬಳಿ ಬೈಕ್ ಮೇಲೆ ಬಂದ ಆರೋಪಿ ಶಾಮೀದ್ಸಾಬ್ ಸಿನಿಮೀಯ ರೀತಿಯಲ್ಲಿ ತಲ್ವಾರ್ ಹಿಡಿದು ಇಳಿಯುತ್ತಾನೆ. ತಲ್ವಾರ್ ಅನ್ನು ಇನ್ನೊಬ್ಬ ಆರೋಪಿ ಪರಶುರಾಮನತ್ತ ತೂರುತ್ತಾನೆ. ಅದನ್ನು ಹಿಡಿದ ಪರಶುರಾಮ, ಸಾರ್ವಜನಿಕವಾಗಿ ಜನರಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ಪ್ರದರ್ಶಿಸುತ್ತಾನೆ. ಈ ದೃಶ್ಯಕ್ಕೆ ಮಹಾಕಾಯ ಎಂಬ ಹಾಡಿನ ಹಿನ್ನೆಲೆ ಸಂಗೀತ ಎಡಿಟ್ ಮಾಡಿ ಅದನ್ನು ಇನ್ಸ್ಟ್ರಾಗ್ರಾಂನಲ್ಲಿ ಹರಿಬಿಡಲಾಗಿತ್ತು. ಈ ದೃಶ್ಯ ಮೊಬೈಲ್ನಲ್ಲಿ ಹರಿದಾಡುತ್ತಿರುವುದನ್ನು ಗಮನಿಸಿದ ಪೊಲೀಸರು ಸ್ವಯಂ ಪ್ರೇರಣೆಯಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಡಿಯೊ ದೃಶ್ಯವನ್ನು ಅಲ್ತಾಫ್ ಜಾಕೀರಸಾಬ್ ಎಂಬಾತ ಮೊಬೈಲ್ನಲ್ಲಿ ಸೆರೆ ಹಿಡಿದ್ದ ಎಂದು ಆರೋಪಿಗಳು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.</p>.<p>ರೀಲ್ಸ್ ಮಾಡಿ, ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ಕಾನೂನು ಬಾಹಿರವಾಗಿ ವರ್ತಿಸುತ್ತಿದ್ದಾರೆ. ಇದರಿಂದ ಜನರು, ಮಹಿಳೆಯರಿಗೆ ಕಿರಿಕಿರಿಯಾಗುತ್ತಿದ್ದು, ಪೊಲೀಸರು ಅಂಥವರನ್ನು ಪತ್ತೆ ಹಚ್ಚಿ, ಕಠಿಣ ಕ್ರಮಕೈಗೊಳ್ಳಬೇಕು’ ಎಂದು ಸಾರ್ವಜನಿಕರು ಪೊಲೀಸರನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>