<p><strong>ಕುಷ್ಟಗಿ:</strong> ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಪಟ್ಟಣದ ಇಬ್ಬರು ಗುರುವಾರ ಮೃತಪಟ್ಟಿದ್ದಾರೆ.</p>.<p>ಲೋಕೋಪಯೋಗಿ ಉಪ ವಿಭಾಗದಲ್ಲಿನ ನಿವೃತ್ತ ನೌಕರ ಸಯ್ಯದ್ ಶಾಮೀದಸಾಬ್ (61) ಪಟ್ಟಣದ ಕೋವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಗುರುವಾರ ಹೃದಯಾಘಾತದಿಂದ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<p>ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರ ಇದ್ದಾರೆ. ಪಟ್ಟಣದ ಹೊರವಲಯದ ಖಬರಸ್ತಾನ್ದಲ್ಲಿ ಅಂತ್ಯ ಸಂಸ್ಕಾರ ನಡೆಯಿತು.</p>.<p>ಹನುಮಸಾಗರ ಮೂಲದ ಇಲ್ಲಿಯ ನಿವಾಸಿ ಈಶಾನ್ಯ ಸಾರಿಗೆ ಸಂಸ್ಥೆ ನೌಕರ ತುಕಾರಾಮ ಹುಲಮನಿ (59) ನಿಧನರಾಗಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು ಎರಡು ವಾರಗಳಿಂದ ಕೋವಿಡ್ ಸೋಂಕಿಗೆ ಒಳಗಾಗಿದ್ದರು.</p>.<p>ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ನಿಧನರಾಗಿದ್ದು ಬಾಗಲಕೋಟೆಯಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ತಿಳಿಸಲಾಗಿದೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ.</p>.<p class="Subhead">50 ಜನ ಸೋಂಕಿತರು: ತಾಲ್ಲೂಕಿನಲ್ಲಿ 50 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ. ಪಟ್ಟಣದಲ್ಲಿ 13 ಜನರಿಗೆ ಹೊಸದಾಗಿ ಕೋವಿಡ್ ಸೋಂಕು ತಗುಲಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಆನಂದ ಗೋಟೂರು ತಿಳಿಸಿದರು.</p>.<p class="Subhead">ಲಸಿಕೆ: ಕೋವ್ಯಾಕ್ಸಿನ್ ಲಸಿಕೆಗಾಗಿ 18 ವರ್ಷ ಮೇಲ್ಪಟ್ಟ ಬಹಳಷ್ಟು ಜನರು ಆನ್ಲೈನ್ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ಶುಕ್ರವಾರ (ಮೇ 14) ದಿಂದ ಕೇವಲ ಎರಡನೇ ಡೋಸ್ ಹಾಕಿಸಿಕೊಳ್ಳುವವರಿಗೆ ಮಾತ್ರ ಲಸಿಕೆ ಹಾಕುವಂತೆ ಮೇಲಧಿಕಾರಿಗಳಿಂದ ಆರೋಗ್ಯ ಸಿಬ್ಬಂದಿಗೆ ಸೂಚನೆ ಬಂದಿದೆ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಪಟ್ಟಣದ ಇಬ್ಬರು ಗುರುವಾರ ಮೃತಪಟ್ಟಿದ್ದಾರೆ.</p>.<p>ಲೋಕೋಪಯೋಗಿ ಉಪ ವಿಭಾಗದಲ್ಲಿನ ನಿವೃತ್ತ ನೌಕರ ಸಯ್ಯದ್ ಶಾಮೀದಸಾಬ್ (61) ಪಟ್ಟಣದ ಕೋವಿಡ್ ಆರೈಕೆ ಕೇಂದ್ರದಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಗುರುವಾರ ಹೃದಯಾಘಾತದಿಂದ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.</p>.<p>ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರ ಇದ್ದಾರೆ. ಪಟ್ಟಣದ ಹೊರವಲಯದ ಖಬರಸ್ತಾನ್ದಲ್ಲಿ ಅಂತ್ಯ ಸಂಸ್ಕಾರ ನಡೆಯಿತು.</p>.<p>ಹನುಮಸಾಗರ ಮೂಲದ ಇಲ್ಲಿಯ ನಿವಾಸಿ ಈಶಾನ್ಯ ಸಾರಿಗೆ ಸಂಸ್ಥೆ ನೌಕರ ತುಕಾರಾಮ ಹುಲಮನಿ (59) ನಿಧನರಾಗಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ್ದ ಅವರು ಎರಡು ವಾರಗಳಿಂದ ಕೋವಿಡ್ ಸೋಂಕಿಗೆ ಒಳಗಾಗಿದ್ದರು.</p>.<p>ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ನಿಧನರಾಗಿದ್ದು ಬಾಗಲಕೋಟೆಯಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ ಎಂದು ತಿಳಿಸಲಾಗಿದೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ.</p>.<p class="Subhead">50 ಜನ ಸೋಂಕಿತರು: ತಾಲ್ಲೂಕಿನಲ್ಲಿ 50 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ. ಪಟ್ಟಣದಲ್ಲಿ 13 ಜನರಿಗೆ ಹೊಸದಾಗಿ ಕೋವಿಡ್ ಸೋಂಕು ತಗುಲಿದೆ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಆನಂದ ಗೋಟೂರು ತಿಳಿಸಿದರು.</p>.<p class="Subhead">ಲಸಿಕೆ: ಕೋವ್ಯಾಕ್ಸಿನ್ ಲಸಿಕೆಗಾಗಿ 18 ವರ್ಷ ಮೇಲ್ಪಟ್ಟ ಬಹಳಷ್ಟು ಜನರು ಆನ್ಲೈನ್ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ಶುಕ್ರವಾರ (ಮೇ 14) ದಿಂದ ಕೇವಲ ಎರಡನೇ ಡೋಸ್ ಹಾಕಿಸಿಕೊಳ್ಳುವವರಿಗೆ ಮಾತ್ರ ಲಸಿಕೆ ಹಾಕುವಂತೆ ಮೇಲಧಿಕಾರಿಗಳಿಂದ ಆರೋಗ್ಯ ಸಿಬ್ಬಂದಿಗೆ ಸೂಚನೆ ಬಂದಿದೆ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>