<p>ಕೊಪ್ಪಳ: ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮಸಾಗರ ತಾಂಡಾ ಕ್ರಾಸ್ ಬಳಿ ಮಂಗಳವಾರ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.</p>.<p>ಇಬ್ಬರು ವ್ಯಕ್ತಿಗಳು ದ್ವಿಚಕ್ರವಾಹನದಲ್ಲಿ ಬೊಮ್ಮಸಾಗರ ಕ್ರಾಸ್ ಕಡೆಯಿಂದ ಕುಷ್ಟಗಿ–ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯ ಏಕಮುಖ ಸಂಚಾರದ ರಸ್ತೆಯಲ್ಲಿ ತೆರಳುತ್ತಿದ್ದರು. ಅವರ ಹಿಂದಿನಿಂದ ಕುಷ್ಟಗಿ ಕಡೆಯಿಂದ ಬಂದ ಉತ್ತರ ಪ್ರದೇಶದ ಲಾರಿಯ ಚಾಲಕ ಶಿವಮಂಗಲ ಸುಖದೇವ್ ವೇಗವಾಗಿ ದ್ವಿಚಕ್ರ ವಾಹನಕ್ಕೆ ಬಲವಾಗಿ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ.</p>.<p>ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರನ್ನು ಲಾರಿ 100 ಮೀಟರ್ ದೂರ ಎಳೆದುಕೊಂಡು ಹೋಗಿದ್ದರಿಂದ ಬೈಕ್ ಚಲಾಯಿಸುತ್ತಿದ್ದ ಪರಸಪ್ಪ ಕನಕಗಿರಿ (40) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪರಸಪ್ಪನಿಗೆ ತೀವ್ರಗಾಯಗಳಾಗಿ ದೇಹದ ಮಾಂಸಖಂಡಗಳು ಹೊರಗಡೆ ಬಂದಿದ್ದವು. </p>.<p>ಬೈಕ್ ಹಿಂಬದಿಯಲ್ಲಿದ್ದ ಈರಪ್ಪ (43) ಗಂಭೀರವಾಗಿ ಗಾಯಗೊಂಡಿದ್ದರಿಂದ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಈ ಕುರಿತು ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮಸಾಗರ ತಾಂಡಾ ಕ್ರಾಸ್ ಬಳಿ ಮಂಗಳವಾರ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.</p>.<p>ಇಬ್ಬರು ವ್ಯಕ್ತಿಗಳು ದ್ವಿಚಕ್ರವಾಹನದಲ್ಲಿ ಬೊಮ್ಮಸಾಗರ ಕ್ರಾಸ್ ಕಡೆಯಿಂದ ಕುಷ್ಟಗಿ–ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯ ಏಕಮುಖ ಸಂಚಾರದ ರಸ್ತೆಯಲ್ಲಿ ತೆರಳುತ್ತಿದ್ದರು. ಅವರ ಹಿಂದಿನಿಂದ ಕುಷ್ಟಗಿ ಕಡೆಯಿಂದ ಬಂದ ಉತ್ತರ ಪ್ರದೇಶದ ಲಾರಿಯ ಚಾಲಕ ಶಿವಮಂಗಲ ಸುಖದೇವ್ ವೇಗವಾಗಿ ದ್ವಿಚಕ್ರ ವಾಹನಕ್ಕೆ ಬಲವಾಗಿ ಡಿಕ್ಕಿ ಹೊಡೆದಿದ್ದರಿಂದ ಈ ಅವಘಡ ಸಂಭವಿಸಿದೆ.</p>.<p>ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರನ್ನು ಲಾರಿ 100 ಮೀಟರ್ ದೂರ ಎಳೆದುಕೊಂಡು ಹೋಗಿದ್ದರಿಂದ ಬೈಕ್ ಚಲಾಯಿಸುತ್ತಿದ್ದ ಪರಸಪ್ಪ ಕನಕಗಿರಿ (40) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪರಸಪ್ಪನಿಗೆ ತೀವ್ರಗಾಯಗಳಾಗಿ ದೇಹದ ಮಾಂಸಖಂಡಗಳು ಹೊರಗಡೆ ಬಂದಿದ್ದವು. </p>.<p>ಬೈಕ್ ಹಿಂಬದಿಯಲ್ಲಿದ್ದ ಈರಪ್ಪ (43) ಗಂಭೀರವಾಗಿ ಗಾಯಗೊಂಡಿದ್ದರಿಂದ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಈ ಕುರಿತು ಇಲ್ಲಿನ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>