ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ರಾಜ್ಯದ 20 ಜಿಲ್ಲೆಗಳಿಂದ ಎಲ್ಲಾ ವಯಸ್ಸು, ಶೈಕ್ಷಣಿಕ ಹಿನ್ನಲೆಯ ವಿವಿಧ ಜಾತಿ, ಧರ್ಮಗಳ ಸಾವಿರಕ್ಕೂ ಹೆಚ್ಚು ಮತದಾರರ ಕ್ಷಿಪ್ರ ಸಮೀಕ್ಷೆ 2022ರ ಆಗಸ್ಟ್ ಹಾಗೂ ಸೆಪ್ಟೆಂಬರ್ನಲ್ಲಿ ಮಾಡಲಾಗಿದೆ. ನಿರುದ್ಯೋಗ, ಬೆಲೆಏರಿಕೆ, ಭ್ರಷ್ಟಾಚಾರ ರಾಜ್ಯದ ಜನರನ್ನು ಕಾಡುತ್ತಿರುವ ಸಮಸ್ಯೆಗಳಾಗಿವೆ. ಇವುಗಳ ಜೊತೆಗೆ ರಾಜ್ಯದಲ್ಲಿ ಇತ್ತೀಚೆಗೆ ಜರುಗಿದ ಕೋಮುಗಲಭೆ, ಮತೀಯ ವಿವಾದಗಳು ಸಹಜವಾಗಿ ಹುಟ್ಟಿರುವುದಿಲ್ಲ. ಅವುಗಳನ್ನು ಸೃಷ್ಟಿ ಮಾಡಲಾಗಿದೆ ಎನ್ನುವ ಮಹತ್ವದ ಅಂಶ ಪದವೀಧರರು, ಪಟ್ಟಣದ ಜನ ಮತ್ತು ಮೇಲ್ಜಾತಿಯ ಸಮುದಾಯದ ಜನ ಪಾಲ್ಗೊಂಡಿದ್ದ ಜನರ ಸಮೀಕ್ಷೆಯಿಂದ ಗೊತ್ತಾಗಿದೆ’ ಎಂದರು.