<p><strong>ಕೊಪ್ಪಳ:</strong> ಪ್ರಕರಣವೊಂದರ ವಿಚಾರಣೆಗಾಗಿ ಇಲ್ಲಿಗೆ ಸ್ಥಳಾಂತರಗೊಂಡಿರುವ ಜಿಲ್ಲಾ ಕಾರಾಗೃಹದ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ಆತ ರಂಪಾಟ ಮಾಡಿದ್ದು, ಪೊಲೀಸರ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ.</p>.<p>ಡಿಎಆರ್ ಕೇಂದ್ರದ ಪೊಲೀಸ್ ಅಧಿಕಾರಿ ಸಂತೋಷ ಕೋಚಲಾಪೂರಮಠ ಇತ್ತೀಚೆಗೆ ಆರೋಪಿ ಕಾರ್ಮಿಕ ಮಹಮ್ಮದ್ ಖಲೀಲ್ ಉಲ್ಲಾನನ್ನು ಪೈಲ್ಸ್ ಕಾಯಿಲೆ ಚಿಕಿತ್ಸೆ ಮಾಡಿಸಿಕೊಂಡು ಬರಲು ತಮ್ಮ ಸಿಬ್ಬಂದಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದಾಗ ಅರೋಪಿ ಏಕಾಏಕಿ ಸಿಟ್ಟಿಗೆದ್ದು ಪೊಲೀಸರನ್ನು ಎಳೆದಾಡಿ ಕೂಗಾಡಿದ್ದಾನೆ.</p>.<p>ನಿಮ್ಮ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಸ್ಥಳಕ್ಕೆ ಕರೆಯಿಸಿ. ಅವರೊಂದಿಗೆ ಮಾತನಾಡಬೇಕು. ಇಲ್ಲವಾದರೆ ಆಸ್ಪತ್ರೆಯ ಗಾಜು ಒಡೆದು ಹಾಕುತ್ತೇನೆ ಎಂದು ಕೂಗಾಡಿ ಪಕ್ಕದಲ್ಲಿಯೇ ಇದ್ದ ಆಸ್ಪತ್ರೆಗೆ ಬಣ್ಣ ಬಳೆಯುತ್ತಿದ್ದ ಕಾರ್ಮಿಕರ ಹತ್ತಿರದ ಟಿನ್ನರ್ ಬಾಟಲ್ ಎತ್ತಿಕೊಂಡು ಕುಡಿಯಲು ಮತ್ತು ಮೈಮೇಲೆ ಹಾಕಿಕೊಳ್ಳಲು ಪ್ರಯತ್ನಿಸಿದ್ದಾನೆ.</p>.<p>ಜೊತೆಯಲ್ಲಿಯೇ ಇದ್ದ ಪೊಲೀಸರು ಆರೋಪಿಯನ್ನು ಹಿಡಿಯಲು ಹೋದಾಗ ಆತ ಪೊಲೀಸ್ ಸಿಬ್ಬಂದಿ ಹುಲಗಪ್ಪ ಎಂಬುವರಿಗೆ ಗಾಯಗೊಳಿಸಿದ್ದಾನೆ. ಬಳಿಕ ಎಲ್ಲ ಪೊಲೀಸರು ಸೇರಿ ಹಿಡಿದುಕೊಂಡು ಮಹಮ್ಮದ್ ಖಲೀಲ್ನನ್ನು ತುರ್ತು ನಿಗಾ ಘಟಕದ ವಾರ್ಡ್ಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ.</p>.<p>ಕೂಲಿ ಕೆಲಸ ಮಾಡುವ ಬೆಂಗಳೂರಿನ ಮಹಮ್ಮದ್ ಖಲೀಲ್ ಮೇಲೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇತನ ಮೇಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಕಳೆದ ವರ್ಷ ದಾಖಲಾದ ಪ್ರಕರಣದ ಆರೋಪಿಯಾಗಿದ್ದಾನೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಪ್ರಕರಣವೊಂದರ ವಿಚಾರಣೆಗಾಗಿ ಇಲ್ಲಿಗೆ ಸ್ಥಳಾಂತರಗೊಂಡಿರುವ ಜಿಲ್ಲಾ ಕಾರಾಗೃಹದ ಆರೋಪಿಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ಆತ ರಂಪಾಟ ಮಾಡಿದ್ದು, ಪೊಲೀಸರ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ.</p>.<p>ಡಿಎಆರ್ ಕೇಂದ್ರದ ಪೊಲೀಸ್ ಅಧಿಕಾರಿ ಸಂತೋಷ ಕೋಚಲಾಪೂರಮಠ ಇತ್ತೀಚೆಗೆ ಆರೋಪಿ ಕಾರ್ಮಿಕ ಮಹಮ್ಮದ್ ಖಲೀಲ್ ಉಲ್ಲಾನನ್ನು ಪೈಲ್ಸ್ ಕಾಯಿಲೆ ಚಿಕಿತ್ಸೆ ಮಾಡಿಸಿಕೊಂಡು ಬರಲು ತಮ್ಮ ಸಿಬ್ಬಂದಿಯೊಂದಿಗೆ ಆಸ್ಪತ್ರೆಗೆ ತೆರಳಿದ್ದಾಗ ಅರೋಪಿ ಏಕಾಏಕಿ ಸಿಟ್ಟಿಗೆದ್ದು ಪೊಲೀಸರನ್ನು ಎಳೆದಾಡಿ ಕೂಗಾಡಿದ್ದಾನೆ.</p>.<p>ನಿಮ್ಮ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಸ್ಥಳಕ್ಕೆ ಕರೆಯಿಸಿ. ಅವರೊಂದಿಗೆ ಮಾತನಾಡಬೇಕು. ಇಲ್ಲವಾದರೆ ಆಸ್ಪತ್ರೆಯ ಗಾಜು ಒಡೆದು ಹಾಕುತ್ತೇನೆ ಎಂದು ಕೂಗಾಡಿ ಪಕ್ಕದಲ್ಲಿಯೇ ಇದ್ದ ಆಸ್ಪತ್ರೆಗೆ ಬಣ್ಣ ಬಳೆಯುತ್ತಿದ್ದ ಕಾರ್ಮಿಕರ ಹತ್ತಿರದ ಟಿನ್ನರ್ ಬಾಟಲ್ ಎತ್ತಿಕೊಂಡು ಕುಡಿಯಲು ಮತ್ತು ಮೈಮೇಲೆ ಹಾಕಿಕೊಳ್ಳಲು ಪ್ರಯತ್ನಿಸಿದ್ದಾನೆ.</p>.<p>ಜೊತೆಯಲ್ಲಿಯೇ ಇದ್ದ ಪೊಲೀಸರು ಆರೋಪಿಯನ್ನು ಹಿಡಿಯಲು ಹೋದಾಗ ಆತ ಪೊಲೀಸ್ ಸಿಬ್ಬಂದಿ ಹುಲಗಪ್ಪ ಎಂಬುವರಿಗೆ ಗಾಯಗೊಳಿಸಿದ್ದಾನೆ. ಬಳಿಕ ಎಲ್ಲ ಪೊಲೀಸರು ಸೇರಿ ಹಿಡಿದುಕೊಂಡು ಮಹಮ್ಮದ್ ಖಲೀಲ್ನನ್ನು ತುರ್ತು ನಿಗಾ ಘಟಕದ ವಾರ್ಡ್ಗೆ ಕರೆದುಕೊಂಡು ಹೋಗಿ ದಾಖಲಿಸಿದ್ದಾರೆ.</p>.<p>ಕೂಲಿ ಕೆಲಸ ಮಾಡುವ ಬೆಂಗಳೂರಿನ ಮಹಮ್ಮದ್ ಖಲೀಲ್ ಮೇಲೆ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಇಲ್ಲಿನ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇತನ ಮೇಲೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಕಳೆದ ವರ್ಷ ದಾಖಲಾದ ಪ್ರಕರಣದ ಆರೋಪಿಯಾಗಿದ್ದಾನೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>