<p><strong>ಕಾರಟಗಿ:</strong> ಪಟ್ಟಣದ 11ನೇ ವಾರ್ಡ್ನ ಸಿಬಿಎಸ್ ನಗರದಲ್ಲಿ ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಮಾಡಲಾಗಿದೆ ಎಂದು ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>3 ತಿಂಗಳ ಹಿಂದೆಯೇ ಚರಂಡಿ ಕಾಮಗಾರಿ ಮಾಡಲಾಗಿದ್ದು, ಅದು ಅವೈಜ್ಞಾನಿಕವಾಗಿದೆ. ಇದರಿಂದಾಗಿ ಚರಂಡಿಯ ನೀರು ರಸ್ತೆಯಲ್ಲಿಯೇ ಹರಿಯುತ್ತಿದೆ.</p>.<p>ಈ ರಸ್ತೆಯಲ್ಲಿ ಚಿಕ್ಕಮಕ್ಕಳು, ವೃದ್ಧರು ಮತ್ತು ಮಹಿಳೆಯರ ಸಂಚರಿಸಲು ಸಮಸ್ಯೆಯಾಗಿದೆ. ಮುರಂ ಹಾಕಿ ರಸ್ತೆ ಸಮತಟ್ಟು ಮಾಡಿದರೆ ಜನರಿಗೆ ಅನುಕೂಲವಾಗಲಿದೆ. ಶೀಘ್ರವೇ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದು ಸ್ಥಳೀಯರಾದ ಶಿವಪುತ್ರಪ್ಪ, ಚನ್ನನಗೌಡ, ಶರಣಪ್ಪ ಸುಂಕದ ಆಗ್ರಹಿಸಿದರು.</p>.<p>ಕಾಮಗಾರಿಯ ಆರಂಭದಿಂದಲೂ ಯೋಜನೆಯಂತೆ ಚರಂಡಿ ನಿರ್ಮಾಣ ಮಾಡಿಲ್ಲ. ಇದರಿಂದಾಗಿ ಚರಂಡಿಯ ನೀರು ರಸ್ತೆಗೆ ಬಂದು ನಿಲ್ಲುತ್ತಿದೆ. ಅಧಿಕಾರಿಗಳು ಮಾತ್ರ ತಮ್ಮ ನಿರ್ಲಕ್ಷ್ಯತನ ಮುಂದುವರೆಸಿದ್ದಾರೆ ಎಂದು ಚಂದ್ರಶೇಖರಸ್ವಾಮಿ ಅಸಮಧಾನ ವ್ಯಕ್ತಪಡಿಸಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಡಾ. ಎನ್. ಶಿವಲಿಂಗಪ್ಪ ಪ್ರತಿಕ್ರಿಯಿಸಿ, ಚರಂಡಿ ಕಾಮಗಾರಿ ಇನ್ನೂ ಬಾಕಿಯಿದೆ. ವ್ಯವಸ್ಥಿತ ಕಾಮಗಾರಿ ಮಾಡಲು ಲೇಔಟ್ಗಳು ಸರಿಯಿಲ್ಲ. ಜನರು ಸಹಕರಿಸಬೇಕು. ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ಪಟ್ಟಣದ 11ನೇ ವಾರ್ಡ್ನ ಸಿಬಿಎಸ್ ನಗರದಲ್ಲಿ ಅವೈಜ್ಞಾನಿಕವಾಗಿ ಚರಂಡಿ ನಿರ್ಮಾಣ ಮಾಡಲಾಗಿದೆ ಎಂದು ಜನರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>.<p>3 ತಿಂಗಳ ಹಿಂದೆಯೇ ಚರಂಡಿ ಕಾಮಗಾರಿ ಮಾಡಲಾಗಿದ್ದು, ಅದು ಅವೈಜ್ಞಾನಿಕವಾಗಿದೆ. ಇದರಿಂದಾಗಿ ಚರಂಡಿಯ ನೀರು ರಸ್ತೆಯಲ್ಲಿಯೇ ಹರಿಯುತ್ತಿದೆ.</p>.<p>ಈ ರಸ್ತೆಯಲ್ಲಿ ಚಿಕ್ಕಮಕ್ಕಳು, ವೃದ್ಧರು ಮತ್ತು ಮಹಿಳೆಯರ ಸಂಚರಿಸಲು ಸಮಸ್ಯೆಯಾಗಿದೆ. ಮುರಂ ಹಾಕಿ ರಸ್ತೆ ಸಮತಟ್ಟು ಮಾಡಿದರೆ ಜನರಿಗೆ ಅನುಕೂಲವಾಗಲಿದೆ. ಶೀಘ್ರವೇ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದು ಸ್ಥಳೀಯರಾದ ಶಿವಪುತ್ರಪ್ಪ, ಚನ್ನನಗೌಡ, ಶರಣಪ್ಪ ಸುಂಕದ ಆಗ್ರಹಿಸಿದರು.</p>.<p>ಕಾಮಗಾರಿಯ ಆರಂಭದಿಂದಲೂ ಯೋಜನೆಯಂತೆ ಚರಂಡಿ ನಿರ್ಮಾಣ ಮಾಡಿಲ್ಲ. ಇದರಿಂದಾಗಿ ಚರಂಡಿಯ ನೀರು ರಸ್ತೆಗೆ ಬಂದು ನಿಲ್ಲುತ್ತಿದೆ. ಅಧಿಕಾರಿಗಳು ಮಾತ್ರ ತಮ್ಮ ನಿರ್ಲಕ್ಷ್ಯತನ ಮುಂದುವರೆಸಿದ್ದಾರೆ ಎಂದು ಚಂದ್ರಶೇಖರಸ್ವಾಮಿ ಅಸಮಧಾನ ವ್ಯಕ್ತಪಡಿಸಿದರು.</p>.<p>ಪುರಸಭೆ ಮುಖ್ಯಾಧಿಕಾರಿ ಡಾ. ಎನ್. ಶಿವಲಿಂಗಪ್ಪ ಪ್ರತಿಕ್ರಿಯಿಸಿ, ಚರಂಡಿ ಕಾಮಗಾರಿ ಇನ್ನೂ ಬಾಕಿಯಿದೆ. ವ್ಯವಸ್ಥಿತ ಕಾಮಗಾರಿ ಮಾಡಲು ಲೇಔಟ್ಗಳು ಸರಿಯಿಲ್ಲ. ಜನರು ಸಹಕರಿಸಬೇಕು. ಮುಂದಿನ ದಿನಗಳಲ್ಲಿ ಅಗತ್ಯ ಕ್ರಮ ವಹಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>