<p>ಕಾರಟಗಿ: ಚಿತ್ರದುರ್ಗ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಘಟನೆಯನ್ನು ಇಲ್ಲಿಯ ಭಗೀರಥ ಉಪ್ಪಾರ ಸಮಾಜದ ತಾಲ್ಲೂಕು ಘಟಕ ಖಂಡಿಸಿದೆ.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಗೆ ತೆರಳಿದ ಸಮಾಜದವರು, ಅತ್ಯಾಚರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಶನಿವಾರ ಕಂದಾಯ ಅಧಿಕಾರಿಗೆ ಮನವಿಪತ್ರ ಸಲ್ಲಿಸಿದರು.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನು ಬಂಧಿಸಿದ್ದು, ಇನ್ನುಳಿದವರನ್ನು ಶೀಘ್ರ ಪತ್ತೆ ಮಾಡಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು. ಮಕ್ಕಳ ಹಾಗೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಬೇಕು. ಸರ್ಕಾರ ತಕ್ಷಣವೇ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಸಮಾಜದ ಗೌರವಾಧ್ಯಕ್ಷರಾದ ತಿಮ್ಮಣ್ಣ ಹಗೇದಾಳ, ಶರಣಪ್ಪ ಮೈಲಾಪುರ, ಅಧ್ಯಕ್ಷ ಬಂಡಿ ಅಯ್ಯಪ್ಪ, ಪ್ರಮುಖರಾದ ಶಿವಮೂರ್ತೆಪ್ಪ, ಗುರುರಾಜ ಸಾಗರ್, ಅಯ್ಯಪ್ಪ ಉಪ್ಪಾರ, ರಾಜಪ್ಪ ಗುಡೂರು, ಯಂಕೋಬ ಪೂಜಾರಿ, ರಾಘವೇಂದ್ರ, ಶೇಷಗಿರಿ ಕಟ್ಟಿಮನಿ ವಕೀಲ, ದೇವರಾಜ ಮೈಸೂರು, ಶ್ರೀನಿವಾಸ ಹಗೇದಾಳ, ಚನ್ನಪ್ಪ ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರಟಗಿ: ಚಿತ್ರದುರ್ಗ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ಘಟನೆಯನ್ನು ಇಲ್ಲಿಯ ಭಗೀರಥ ಉಪ್ಪಾರ ಸಮಾಜದ ತಾಲ್ಲೂಕು ಘಟಕ ಖಂಡಿಸಿದೆ.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಗೆ ತೆರಳಿದ ಸಮಾಜದವರು, ಅತ್ಯಾಚರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಶನಿವಾರ ಕಂದಾಯ ಅಧಿಕಾರಿಗೆ ಮನವಿಪತ್ರ ಸಲ್ಲಿಸಿದರು.</p>.<p>‘ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನು ಬಂಧಿಸಿದ್ದು, ಇನ್ನುಳಿದವರನ್ನು ಶೀಘ್ರ ಪತ್ತೆ ಮಾಡಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಮಾಡಬೇಕು. ಮಕ್ಕಳ ಹಾಗೂ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಬೇಕು. ಸರ್ಕಾರ ತಕ್ಷಣವೇ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಸಮಾಜದ ಗೌರವಾಧ್ಯಕ್ಷರಾದ ತಿಮ್ಮಣ್ಣ ಹಗೇದಾಳ, ಶರಣಪ್ಪ ಮೈಲಾಪುರ, ಅಧ್ಯಕ್ಷ ಬಂಡಿ ಅಯ್ಯಪ್ಪ, ಪ್ರಮುಖರಾದ ಶಿವಮೂರ್ತೆಪ್ಪ, ಗುರುರಾಜ ಸಾಗರ್, ಅಯ್ಯಪ್ಪ ಉಪ್ಪಾರ, ರಾಜಪ್ಪ ಗುಡೂರು, ಯಂಕೋಬ ಪೂಜಾರಿ, ರಾಘವೇಂದ್ರ, ಶೇಷಗಿರಿ ಕಟ್ಟಿಮನಿ ವಕೀಲ, ದೇವರಾಜ ಮೈಸೂರು, ಶ್ರೀನಿವಾಸ ಹಗೇದಾಳ, ಚನ್ನಪ್ಪ ಪೂಜಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>