ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

UPSC ಫಲಿತಾಂಶ: ಗಂಗಾವತಿ ಮೂಲದ ಅಪೂರ್ವಗೆ 191ನೇ ರ್‍ಯಾಂಕ್

Last Updated 30 ಮೇ 2022, 11:12 IST
ಅಕ್ಷರ ಗಾತ್ರ

ಕೊಪ್ಪಳ: ಜಿಲ್ಲೆಯ ಗಂಗಾವತಿ ಮೂಲದ ಅಪೂರ್ವಾ ಬಾಸೂರು ಐಎಎಸ್‌ನಲ್ಲಿ 191 ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ.

ಕೊಪ್ಪಳ ಜಿಲ್ಲಾ ಆರೋಗ್ಯಾಧಿಕಾರಿಯಾಗಿದ್ದ ಡಾ ಶ್ರೀಕಾಂತ ಬಾಸೂರು ಪುತ್ರಿಯಾಗಿದ್ದು, 2010-11 ನೆಯ ಸಾಲಿನಲ್ಲಿ ಗಂಗಾವತಿಯಲ್ಲಿ ಎಸ್ಸೆಸ್ಸೆಲ್ಸಿ ಓದಿದ್ದಾರೆ.

ಮಂಗಳೂರಿನ ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಪಿಯುಸಿ ಬೆಂಗಳೂರಿನ‌ ಆರ್.ವಿ. ಡೆಂಟಲ್ ಕಾಲೇಜಿನಲ್ಲಿ ಬಿಡಿಎಸ್ ಪದವಿ ಪಡೆದಿರುವ ಅವರು ದೆಹಲಿಯಲ್ಲಿದ್ದು, ಎರಡೂವರೆ ವರ್ಷ ಐಎಎಸ್ ಕೋಚಿಂಗ್ ಪಡೆದಿದ್ದಾರೆ. ಅಪೂರ್ವ ಅವರು ಬೆಂಗಳೂರಿನಲ್ಲಿ ಕುಟುಂಬದವರೊಂದಿಗೆ ಸಂತಸ ಹಂಚಿಕೊಂಡಿದ್ದಾರೆ.

'ಸಮರ್ಪಣಾ ಭಾವನೆ. ಇಷ್ಟ ಪಟ್ಟು ಓದಬೇಕು. ಫಾಲ್ಸಿ ಮೆಕಿಂಗ್, ಅಧಿಕಾರಿಯಾಗಿ ಜನಸೇವೆ ಮಾಡಬೇಕೆನ್ನುವ ಆಸೆ ಇದೆ' ಎಂದು ಅವರು ಸ್ಬೇಹಿತರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಅಪೂರ್ವ ಅವರ ತಂದೆ ಡಾ.ಶ್ರೀಕಾಂತ ಬಾಸೂರು ಈಗ ಆರೋಗ್ಯ ಇಲಾಖೆ ಕೇಂದ್ರ ಕಚೇರಿಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಗಳ ಈ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT