<p><strong>ಕೊಪ್ಪಳ</strong>: ಯೂರಿಯಾ ರಸಗೊಬ್ಬರ ಸಿಗದ ಕಾರಣಕ್ಕೆ ಮೂರು ದಿನಗಳ ಹಿಂದೆ ನಗರದಲ್ಲಿ ಮಣ್ಣು ತಿಂದು ಆಕ್ರೋಶ ವ್ಯಕ್ತಪಡಿಸಿದ್ದ ತಾಲ್ಲೂಕಿನ ಕುಣಿಕೇರಿ ತಾಂಡಾದ ರೈತ ಚಂದ್ರಪ್ಪ ಬಡಗಿ ಅವರ ಮನೆಗೆ ಸೋಮವಾರ ಬಿಜೆಪಿ ಮುಖಂಡರು ತೆರಳಿ ಸಾಂಕೇತಿಕವಾಗಿ ಎರಡು ಚೀಲ ಯೂರಿಯಾ ನೀಡಿ ಸಂತೈಸಿದರು. </p><p>ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ನೇತೃತ್ವದಲ್ಲಿ ಪಕ್ಷದ ಜಿಲ್ಲೆಯ ಮುಖಂಡರು ರೈತನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದರು. ರೈತನ ಮನೆ ಮುಂದೆ ನಿಂತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p><p>ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ನಡಹಳ್ಳಿ ‘ರೈತರ ಬಗ್ಗೆ ಕಾಳಜಿ ಇಲ್ಲದ ರಾಜ್ಯ ಕಾಂಗ್ರೆಸ್ ಸರ್ಕಾರ ಅವರಿಗೆ ಮಣ್ಣು ತಿನ್ನಿಸುತ್ತಿದೆ. ಕೇಂದ್ರ ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರ ನೀಡಿದರೂ ರಾಜ್ಯ ಸರ್ಕಾರ ಅರ್ಹರಿಗೆ ತಲುಪಿಸುವ ಕೆಲಸ ಮಾಡಿಲ್ಲ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಯೂರಿಯಾ ರಸಗೊಬ್ಬರ ಸಿಗದ ಕಾರಣಕ್ಕೆ ಮೂರು ದಿನಗಳ ಹಿಂದೆ ನಗರದಲ್ಲಿ ಮಣ್ಣು ತಿಂದು ಆಕ್ರೋಶ ವ್ಯಕ್ತಪಡಿಸಿದ್ದ ತಾಲ್ಲೂಕಿನ ಕುಣಿಕೇರಿ ತಾಂಡಾದ ರೈತ ಚಂದ್ರಪ್ಪ ಬಡಗಿ ಅವರ ಮನೆಗೆ ಸೋಮವಾರ ಬಿಜೆಪಿ ಮುಖಂಡರು ತೆರಳಿ ಸಾಂಕೇತಿಕವಾಗಿ ಎರಡು ಚೀಲ ಯೂರಿಯಾ ನೀಡಿ ಸಂತೈಸಿದರು. </p><p>ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ನೇತೃತ್ವದಲ್ಲಿ ಪಕ್ಷದ ಜಿಲ್ಲೆಯ ಮುಖಂಡರು ರೈತನ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದರು. ರೈತನ ಮನೆ ಮುಂದೆ ನಿಂತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.</p><p>ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ನಡಹಳ್ಳಿ ‘ರೈತರ ಬಗ್ಗೆ ಕಾಳಜಿ ಇಲ್ಲದ ರಾಜ್ಯ ಕಾಂಗ್ರೆಸ್ ಸರ್ಕಾರ ಅವರಿಗೆ ಮಣ್ಣು ತಿನ್ನಿಸುತ್ತಿದೆ. ಕೇಂದ್ರ ಸಾಕಷ್ಟು ಪ್ರಮಾಣದಲ್ಲಿ ರಸಗೊಬ್ಬರ ನೀಡಿದರೂ ರಾಜ್ಯ ಸರ್ಕಾರ ಅರ್ಹರಿಗೆ ತಲುಪಿಸುವ ಕೆಲಸ ಮಾಡಿಲ್ಲ’ ಎಂದು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>