ಕುಷ್ಟಗಿ: ಪಟ್ಟಣದ ಮಲ್ಲಯ್ಯ ವೃತ್ತದ ಬಳಿ ಇರುವ ಕುರುಬನಾಳ ರಸ್ತೆಗೆ ಮಾಜಿ ಸಚಿವ ದಿ.ವೈಜನಾಥ ಪಾಟೀಲ ಅವರ ಹೆಸರನ್ನು ನಾಮಕರಣಗೊಳಿಸಿದ ಫಲಕವನ್ನು ಗುರುವಾರ ಅನಾವರಣ ಗೊಳಿಸಲಾಯಿತು.
ಗುರುವಾರ ಕಲ್ಯಾಣ ಕರ್ನಾಟಕ ಉತ್ಸವದ ಸಂದರ್ಭದಲ್ಲಿ ಇಲ್ಲಿ ವಿವಿಧ ಸಂಘಟನೆಗಳು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಹೈಕ ಹೋರಾಟ ಸಮಿತಿ ಅಧ್ಯಕ್ಷ ವೀರೇಶ ಬಂಗಾರಶೆಟ್ಟರ, ತಾಜುದ್ದೀನ ದಳಪತಿ ಇತರರು, ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಸಂವಿಧಾನದ 371 ಜೆ ಕಲಂಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ನಡೆದ ಹೋರಾಟದಲ್ಲಿ ದಿ.ವೈಜನಾಥ ಪಾಟೀಲ ಅವರ ಪಾತ್ರ ಮಹತ್ವದ್ದಾಗಿದೆ ಎಂದರು.