<p><strong>ಕಾರಟಗಿ: </strong>ವೈಕುಂಠ ಏಕಾದಶಿ ನಿಮಿತ್ತ ಭಕ್ತರು ಇಲ್ಲಿಯ ಪುರಾತನವಾದ ವೆಂಕಟೇಶ್ವರ ದೇವಾಲಯಕ್ಕೆ ಆಗಮಿಸಿ, ಪೂಜೆ ಸಲ್ಲಿಸಿ, ತೀರ್ಥ, ಪ್ರಸಾದ ಸ್ವೀಕರಿಸಿ ಧನ್ಯತಾಭಾವ ಮೆರೆದರು.</p>.<p>ಹಿಂದಿನ ದಿನದಿಂದಲೇ ಪುರಸಭೆ, ಕಂದಾಯ ಇಲಾಖೆ ಸಿಬ್ಬಂದಿ ದೇವಾಲಯವನ್ನು ಸ್ವಚ್ಛಗೊಳಿಸಿ, ಸ್ಯಾನಿಟೈಜ್ ಮಾಡಿ, ಒಳ ಹೋಗುವ, ಹೊರ ಬರುವ ದಾರಿಯನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದರು. ಕೊರೋನಾ ಷರತ್ತನ್ನು ಕಡ್ಡಾಯವಾಗಿ ಪಾಲಿಸಿ, ಹೆಚ್ಚು ಭಕ್ತರು ಸೇರದಂತೆ ನಿಗಾ ವಹಿಸಿದ್ದರು.</p>.<p>ಅರ್ಚಕ ಭೋಗೇಶಾಚಾರ್ಯ ಇನಾಮದಾರ ನೇತೃತ್ವದಲ್ಲಿ ವಿಶೇಷ ಪೂಜೆ, ಅಲಂಕಾರ, ಪಂಚಾಮೃತಾಭಿಷೇಕ, ಅರ್ಚನೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇವಾಲಯದ ಒಳಗೆ, ಹೊರಗೆ ಬಾಳೆಗಿಡ, ತೆಂಗಿನ ಗರಿ, ಹೂವುಗಳಿಂದ ಅಲಂಕಾರಿಸಲಾಗಿತ್ತು.</p>.<p>ಅರ್ಚಕ ಭೋಗೇಶಾರ್ಯ ಮಾತನಾಡಿ, ವರ್ಷದಲ್ಲೇ ಅತ್ಯತ ಪವಿತ್ರ ದಿನವೇ ವೈಕುಂಠ ಏಕಾದಶಿ, ವೆಂಕಟೇಶ್ವರ ದರ್ಶನ, ಉಪವಾಸ ಮಾಡುವುದು ಇನ್ನೂ ಶ್ರೇಷ್ಠ. ಇದರ ಮಹತ್ವದಿಂದಲೇ ಭಕ್ತರು ಆಗಮಿಸಿ ದರ್ಶನ ಪಡೆಯುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರಟಗಿ: </strong>ವೈಕುಂಠ ಏಕಾದಶಿ ನಿಮಿತ್ತ ಭಕ್ತರು ಇಲ್ಲಿಯ ಪುರಾತನವಾದ ವೆಂಕಟೇಶ್ವರ ದೇವಾಲಯಕ್ಕೆ ಆಗಮಿಸಿ, ಪೂಜೆ ಸಲ್ಲಿಸಿ, ತೀರ್ಥ, ಪ್ರಸಾದ ಸ್ವೀಕರಿಸಿ ಧನ್ಯತಾಭಾವ ಮೆರೆದರು.</p>.<p>ಹಿಂದಿನ ದಿನದಿಂದಲೇ ಪುರಸಭೆ, ಕಂದಾಯ ಇಲಾಖೆ ಸಿಬ್ಬಂದಿ ದೇವಾಲಯವನ್ನು ಸ್ವಚ್ಛಗೊಳಿಸಿ, ಸ್ಯಾನಿಟೈಜ್ ಮಾಡಿ, ಒಳ ಹೋಗುವ, ಹೊರ ಬರುವ ದಾರಿಯನ್ನು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದರು. ಕೊರೋನಾ ಷರತ್ತನ್ನು ಕಡ್ಡಾಯವಾಗಿ ಪಾಲಿಸಿ, ಹೆಚ್ಚು ಭಕ್ತರು ಸೇರದಂತೆ ನಿಗಾ ವಹಿಸಿದ್ದರು.</p>.<p>ಅರ್ಚಕ ಭೋಗೇಶಾಚಾರ್ಯ ಇನಾಮದಾರ ನೇತೃತ್ವದಲ್ಲಿ ವಿಶೇಷ ಪೂಜೆ, ಅಲಂಕಾರ, ಪಂಚಾಮೃತಾಭಿಷೇಕ, ಅರ್ಚನೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ದೇವಾಲಯದ ಒಳಗೆ, ಹೊರಗೆ ಬಾಳೆಗಿಡ, ತೆಂಗಿನ ಗರಿ, ಹೂವುಗಳಿಂದ ಅಲಂಕಾರಿಸಲಾಗಿತ್ತು.</p>.<p>ಅರ್ಚಕ ಭೋಗೇಶಾರ್ಯ ಮಾತನಾಡಿ, ವರ್ಷದಲ್ಲೇ ಅತ್ಯತ ಪವಿತ್ರ ದಿನವೇ ವೈಕುಂಠ ಏಕಾದಶಿ, ವೆಂಕಟೇಶ್ವರ ದರ್ಶನ, ಉಪವಾಸ ಮಾಡುವುದು ಇನ್ನೂ ಶ್ರೇಷ್ಠ. ಇದರ ಮಹತ್ವದಿಂದಲೇ ಭಕ್ತರು ಆಗಮಿಸಿ ದರ್ಶನ ಪಡೆಯುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>