<p><strong>ಗಂಗಾವತಿ</strong>: ಕೋವಿಡ್ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಈ ಬಾರಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಣೆ ಮಾಡಬೇಕು ಎಂದು ತಹಶೀಲ್ದಾರ್ ಯು.ನಾಗರಾಜ್ ಹೇಳಿದರು.</p>.<p>ನಗರದ ಶ್ರೀ ಕೃಷ್ಣ ದೇವರಾಯ ಕಲಾ ಭವನದಲ್ಲಿ ಬುಧವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಸಾಮೂಹಿಕ ಮೇರವಣಿಗೆ ನಿಷೇಧಿಸಲಾಗಿದೆ. ವಾಲ್ಮೀಕಿ ಜಯಂತಿ ಆಚರಣೆಯ ಸಮಾರಂಭಗಳಲ್ಲಿ ನೂರಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂದರು.</p>.<p>ವಾಲ್ಮೀಕಿ ಸಮಾಜದ ಮುಖಂಡ ಜೋಗದ ನಾರಾಯಣಪ್ಪ ಮಾತನಾಡಿ, ಇತ್ತೀಚೆಗೆ ಅಧಿಕೃತ ವಿಜಯನಗರ ಜಿಲ್ಲೆ ಉದ್ಘಾಟನಾ ಸಮಾರಂಭದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.ಅಲ್ಲಿ ಯಾವ ರಾಜಕಾರಣಿ, ಅಧಿಕಾರಿ, ಜನರಿಗೂ ಕೋವಿಡ್ ನಿಯಮಾವಳಿ ಅನ್ವಯಿಸಲಿಲ್ಲ. ಆದರೆ ವಾಲ್ಮೀಕಿ ಜಯಂತಿಗೆ ಅನ್ವಯಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಿಜಯನಗರ ಜಿಲ್ಲೆಗೆ ಒಂದು ನ್ಯಾಯ, ಕೊಪ್ಪಳಕ್ಕೆ ಒಂದು ನ್ಯಾಯ ಮಾಡಬೇಡಿ, ಎಲ್ಲವನ್ನು ಪರಿಪಾಲನೆ ಮಾಡುತ್ತಿರುವುದು ಒಂದೇ ಸರ್ಕಾರ. ಆದ್ದರಿಂದ ವಾಲ್ಮೀಕಿ ಜಯಂತಿ ಅದ್ದೂರಿಯಾಗಿ ಆಚರಿಸಲು ತಾಲ್ಲೂಕು ಆಡಳಿತ ಅನುಮತಿ ನೀಡಬೇಕು ಎಂದು ಸಮಾಜದ ಮುಖಂಡರು ಆಗ್ರಹಿಸಿದರು.</p>.<p>ಈ ವೇಳೆಯಲ್ಲಿ ತಹಶೀಲ್ದಾರ ನಾಗರಾಜ ಮಾತನಾಡಿ, ಇನ್ನೂ ವಾಲ್ಮೀಕಿ ಜಯಂತಿ ಆಚರಣೆಗೆ ಎಂಟು ದಿನಗಳು ಬಾಕಿ ಇದ್ದು, ಅಧಿಕಾರಿಗಳು ಕುರಿತು ಚರ್ಚಿಸಿ, ಸಮಾಜದ ಬೇಡಿಕೆಗಳು ಈಡೇರಿಸುವುದಾಗಿ ಭರವಸೆ ನೀಡಿದರು.</p>.<p>ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ, ಬಿಇಓ ಸೋಮಶೇಖರ್ ಗೌಡ, ಮಲ್ಲೇಶಪ್ಪ ಹೊಸಮನಿ, ವೀರಭದ್ರಪ್ಪ ನಾಯಕ, ಗ್ರೇಡ್ 2 ತಹಶೀಲ್ದಾರ್ ವಿ.ಎಚ್.ಹೊರಪೇಟಿ, ಜೋಗದ ನಾರಾಯಣಪ್ಪ, ಜೋಗದ ಹನುಮಂತಪ್ಪ, ಜೋಗದ ದಳಪತಿ ನಾಯಕ ರಮೇಶ್ ಚೌಡ್ಕಿ, ಅರ್ಜುನ ನಾಯಕ, ವಿರುಪಾಕ್ಷಿ ಹೇರೂರ್, ನಗರಸಭೆ ಆರೋಗ್ಯ ನಿರೀಕ್ಷಕ ನಾಗರಾಜ ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಾಲ್ಮೀಕಿ ಸಮಾಜದ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ಕೋವಿಡ್ 3ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಈ ಬಾರಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಣೆ ಮಾಡಬೇಕು ಎಂದು ತಹಶೀಲ್ದಾರ್ ಯು.ನಾಗರಾಜ್ ಹೇಳಿದರು.</p>.<p>ನಗರದ ಶ್ರೀ ಕೃಷ್ಣ ದೇವರಾಯ ಕಲಾ ಭವನದಲ್ಲಿ ಬುಧವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ಸಾಮೂಹಿಕ ಮೇರವಣಿಗೆ ನಿಷೇಧಿಸಲಾಗಿದೆ. ವಾಲ್ಮೀಕಿ ಜಯಂತಿ ಆಚರಣೆಯ ಸಮಾರಂಭಗಳಲ್ಲಿ ನೂರಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂದರು.</p>.<p>ವಾಲ್ಮೀಕಿ ಸಮಾಜದ ಮುಖಂಡ ಜೋಗದ ನಾರಾಯಣಪ್ಪ ಮಾತನಾಡಿ, ಇತ್ತೀಚೆಗೆ ಅಧಿಕೃತ ವಿಜಯನಗರ ಜಿಲ್ಲೆ ಉದ್ಘಾಟನಾ ಸಮಾರಂಭದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು.ಅಲ್ಲಿ ಯಾವ ರಾಜಕಾರಣಿ, ಅಧಿಕಾರಿ, ಜನರಿಗೂ ಕೋವಿಡ್ ನಿಯಮಾವಳಿ ಅನ್ವಯಿಸಲಿಲ್ಲ. ಆದರೆ ವಾಲ್ಮೀಕಿ ಜಯಂತಿಗೆ ಅನ್ವಯಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ವಿಜಯನಗರ ಜಿಲ್ಲೆಗೆ ಒಂದು ನ್ಯಾಯ, ಕೊಪ್ಪಳಕ್ಕೆ ಒಂದು ನ್ಯಾಯ ಮಾಡಬೇಡಿ, ಎಲ್ಲವನ್ನು ಪರಿಪಾಲನೆ ಮಾಡುತ್ತಿರುವುದು ಒಂದೇ ಸರ್ಕಾರ. ಆದ್ದರಿಂದ ವಾಲ್ಮೀಕಿ ಜಯಂತಿ ಅದ್ದೂರಿಯಾಗಿ ಆಚರಿಸಲು ತಾಲ್ಲೂಕು ಆಡಳಿತ ಅನುಮತಿ ನೀಡಬೇಕು ಎಂದು ಸಮಾಜದ ಮುಖಂಡರು ಆಗ್ರಹಿಸಿದರು.</p>.<p>ಈ ವೇಳೆಯಲ್ಲಿ ತಹಶೀಲ್ದಾರ ನಾಗರಾಜ ಮಾತನಾಡಿ, ಇನ್ನೂ ವಾಲ್ಮೀಕಿ ಜಯಂತಿ ಆಚರಣೆಗೆ ಎಂಟು ದಿನಗಳು ಬಾಕಿ ಇದ್ದು, ಅಧಿಕಾರಿಗಳು ಕುರಿತು ಚರ್ಚಿಸಿ, ಸಮಾಜದ ಬೇಡಿಕೆಗಳು ಈಡೇರಿಸುವುದಾಗಿ ಭರವಸೆ ನೀಡಿದರು.</p>.<p>ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ, ಬಿಇಓ ಸೋಮಶೇಖರ್ ಗೌಡ, ಮಲ್ಲೇಶಪ್ಪ ಹೊಸಮನಿ, ವೀರಭದ್ರಪ್ಪ ನಾಯಕ, ಗ್ರೇಡ್ 2 ತಹಶೀಲ್ದಾರ್ ವಿ.ಎಚ್.ಹೊರಪೇಟಿ, ಜೋಗದ ನಾರಾಯಣಪ್ಪ, ಜೋಗದ ಹನುಮಂತಪ್ಪ, ಜೋಗದ ದಳಪತಿ ನಾಯಕ ರಮೇಶ್ ಚೌಡ್ಕಿ, ಅರ್ಜುನ ನಾಯಕ, ವಿರುಪಾಕ್ಷಿ ಹೇರೂರ್, ನಗರಸಭೆ ಆರೋಗ್ಯ ನಿರೀಕ್ಷಕ ನಾಗರಾಜ ಸೇರಿದಂತೆ ತಾಲ್ಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ವಾಲ್ಮೀಕಿ ಸಮಾಜದ ಮುಖಂಡರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>