<p><strong>ಕೊಪ್ಪಳ</strong>: ‘ಜಿಲ್ಲೆಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲು ಸಂಚಾರ ಸೇರಿ ಜಿಲ್ಲೆಯ ರೈಲ್ವೆ ಅಭಿವೃದ್ಧಿ ಕಾಮಗಾರಿಗೆ ಕ್ರಮ ವಹಿಸಬೇಕು’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಜಿಲ್ಲೆಯ ರೈಲ್ವೆ ಅಭಿವೃದ್ಧಿ ಕಾಮಗಾರಿ ಸ್ಥಿತಿಗತಿ, ಅಗತ್ಯ ಕಾಮಗಾರಿ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಕುಷ್ಟಗಿಯಲ್ಲಿ ರೈಲ್ವೆ ಹಳಿ ಹಾಕಲಾಗಿದ್ದು, ಪ್ರತಿನಿತ್ಯ ಹುಬ್ಬಳ್ಳಿ- ಕುಷ್ಟಗಿ ರೈಲು ಸಂಚಾರ ನಡೆಸಿದರೆ ಈ ಭಾಗದ ಜನತೆಗೆ ಅನುಕೂಲವಾಗಲಿದೆ. ಗಂಗಾವತಿ- ದರೋಜಿ, ಗಂಗಾವತಿ - ಬಾಗಲಕೋಟೆ ರೈಲು ಸಂಚಾರಕ್ಕೆ ಸರ್ವೆ ನಡೆಸಲಾಗಿದೆ. ಈ ಕಾಮಗಾರಿ ತ್ವರಿತವಾಗಿ ಆರಂಭಿಸಲು ಮನವಿ ಮಾಡಲಾಗಿದೆ’ ಎಂದು ಕ್ಯಾವಟರ್ ಹೇಳಿದ್ದಾರೆ.</p>.<p>‘ಬನ್ನಿಕೊಪ್ಪ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಗಳಕೇರಾ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸಬೇಕು. ಹುಬ್ಬಳ್ಳಿ- ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದ್ದು, ಈ ರೈಲು ಗದಗ, ಕೊಪ್ಪಳ, ಬಳ್ಳಾರಿ ಮೂಲಕ ಸಂಚರಿಸುವಂತೆ ಕ್ರಮ ವಹಿಸಬೇಕು ಎಂದು ಕೋರಿದ್ದೇನೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಜಿಲ್ಲೆಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲು ಸಂಚಾರ ಸೇರಿ ಜಿಲ್ಲೆಯ ರೈಲ್ವೆ ಅಭಿವೃದ್ಧಿ ಕಾಮಗಾರಿಗೆ ಕ್ರಮ ವಹಿಸಬೇಕು’ ಎಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಜಿಲ್ಲೆಯ ರೈಲ್ವೆ ಅಭಿವೃದ್ಧಿ ಕಾಮಗಾರಿ ಸ್ಥಿತಿಗತಿ, ಅಗತ್ಯ ಕಾಮಗಾರಿ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಕುಷ್ಟಗಿಯಲ್ಲಿ ರೈಲ್ವೆ ಹಳಿ ಹಾಕಲಾಗಿದ್ದು, ಪ್ರತಿನಿತ್ಯ ಹುಬ್ಬಳ್ಳಿ- ಕುಷ್ಟಗಿ ರೈಲು ಸಂಚಾರ ನಡೆಸಿದರೆ ಈ ಭಾಗದ ಜನತೆಗೆ ಅನುಕೂಲವಾಗಲಿದೆ. ಗಂಗಾವತಿ- ದರೋಜಿ, ಗಂಗಾವತಿ - ಬಾಗಲಕೋಟೆ ರೈಲು ಸಂಚಾರಕ್ಕೆ ಸರ್ವೆ ನಡೆಸಲಾಗಿದೆ. ಈ ಕಾಮಗಾರಿ ತ್ವರಿತವಾಗಿ ಆರಂಭಿಸಲು ಮನವಿ ಮಾಡಲಾಗಿದೆ’ ಎಂದು ಕ್ಯಾವಟರ್ ಹೇಳಿದ್ದಾರೆ.</p>.<p>‘ಬನ್ನಿಕೊಪ್ಪ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಗಳಕೇರಾ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸಬೇಕು. ಹುಬ್ಬಳ್ಳಿ- ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುತ್ತಿದ್ದು, ಈ ರೈಲು ಗದಗ, ಕೊಪ್ಪಳ, ಬಳ್ಳಾರಿ ಮೂಲಕ ಸಂಚರಿಸುವಂತೆ ಕ್ರಮ ವಹಿಸಬೇಕು ಎಂದು ಕೋರಿದ್ದೇನೆ. ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>