<p><strong>ಗಂಗಾವತಿ</strong>: ಇಲ್ಲಿನ ಸಿದ್ದಿಕೇರಿ ರಸ್ತೆಯಲ್ಲಿನ ಶಂಕರ ಮಠದ ಶಾರದಾದೇವಿ ದೇವಸ್ಥಾನದಲ್ಲಿ ಸೋಮವಾರ ಶೃಂಗೇರಿ ಪೀಠದ 36ನೇ ಪೀಠಾಧಿಪತಿ ಶ್ರೀಭಾರತಿ ತೀರ್ಥಸ್ವಾಮಿಗಳ 74ನೇ ವರ್ಷದ ವರ್ಧಂತಿ ಮಹೋತ್ಸವ ಜರುಗಿತು.</p>.<p>ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ಶಾರದಾ ದೇವಿಗೆ ಪಂಚಾಮೃತ, ಕುಂಕುಮಾರ್ಚನೆ, ಮಹಾಮಂಗಳಾರತಿ, ವಿಶೇಷ ಹೂವಿನ ಅಲಂಕಾರ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.</p>.<p>ದೇವಸ್ಥಾನ ಧರ್ಮದರ್ಶಿ ಸುದರ್ಶನ ವೈದ್ಯ ಮಾತನಾಡಿ,‘ವರ್ಧಂತಿ ಮಹೋತ್ಸವ ಅಂಗವಾಗಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಶಾಲಾಶುಲ್ಕ, ಲ್ಯಾಪ್ಟಾಪ್ ವಿತರಣೆ, ಗೋ ಸಂರಕ್ಷಣೆಗೆ ಮೇವು ಹಂಚಿಕೆ ಸೇರಿ ಹಲವು ರೀತಿಯ ಸಾಮಾಜಿಕ ಕಾರ್ಯಗಳು ಮಾಡಲಾಗುತ್ತಿದೆ’ ಎಂದು ಹೇಳಿದರು.</p>.<p>ನಂತರ ಭಜನಾ ಮಂಡಳಿಗಳಿಂದ ಭಜನೆ, ಪಾರಾಯಣ, ಶಿವಪಂಚಾಕ್ಷರ ನಕ್ಷತ್ರ ಮಾಲಾ ಸ್ತೋತ್ರ ಸೇರಿ ಹಲವು ಕಾರ್ಯಕ್ರಮಗಳು ಜರುಗಿದವು.</p>.<p>ಶ್ರೀಪಾದರಾವ ಮುಧೋಳಕರ, ಅರ್ಚಕ ಕುಮಾರಭಟ್, ರಾಘವೇಂದ್ರ ಅಳವಂಡಿಕರ್, ವೇಣುಗೋಪಾಲ, ಶೇಷಗಿರಿ ಗಡಾದ್, ಜಗನ್ನಾಥ ಅಳವಂಡಿಕರ್, ಶಂಕರ ಹೊಸಳ್ಳಿ, ಬೇವಿನಾಳ ಪ್ರಲ್ಹಾದ್ ಆಚಾರ್, ಕಾಶೀನಾಥ ಭಟ್ ಸೇರಿ ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ಇಲ್ಲಿನ ಸಿದ್ದಿಕೇರಿ ರಸ್ತೆಯಲ್ಲಿನ ಶಂಕರ ಮಠದ ಶಾರದಾದೇವಿ ದೇವಸ್ಥಾನದಲ್ಲಿ ಸೋಮವಾರ ಶೃಂಗೇರಿ ಪೀಠದ 36ನೇ ಪೀಠಾಧಿಪತಿ ಶ್ರೀಭಾರತಿ ತೀರ್ಥಸ್ವಾಮಿಗಳ 74ನೇ ವರ್ಷದ ವರ್ಧಂತಿ ಮಹೋತ್ಸವ ಜರುಗಿತು.</p>.<p>ಮಹೋತ್ಸವ ನಿಮಿತ್ತ ದೇವಸ್ಥಾನದಲ್ಲಿ ಶಾರದಾ ದೇವಿಗೆ ಪಂಚಾಮೃತ, ಕುಂಕುಮಾರ್ಚನೆ, ಮಹಾಮಂಗಳಾರತಿ, ವಿಶೇಷ ಹೂವಿನ ಅಲಂಕಾರ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.</p>.<p>ದೇವಸ್ಥಾನ ಧರ್ಮದರ್ಶಿ ಸುದರ್ಶನ ವೈದ್ಯ ಮಾತನಾಡಿ,‘ವರ್ಧಂತಿ ಮಹೋತ್ಸವ ಅಂಗವಾಗಿ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಶಾಲಾಶುಲ್ಕ, ಲ್ಯಾಪ್ಟಾಪ್ ವಿತರಣೆ, ಗೋ ಸಂರಕ್ಷಣೆಗೆ ಮೇವು ಹಂಚಿಕೆ ಸೇರಿ ಹಲವು ರೀತಿಯ ಸಾಮಾಜಿಕ ಕಾರ್ಯಗಳು ಮಾಡಲಾಗುತ್ತಿದೆ’ ಎಂದು ಹೇಳಿದರು.</p>.<p>ನಂತರ ಭಜನಾ ಮಂಡಳಿಗಳಿಂದ ಭಜನೆ, ಪಾರಾಯಣ, ಶಿವಪಂಚಾಕ್ಷರ ನಕ್ಷತ್ರ ಮಾಲಾ ಸ್ತೋತ್ರ ಸೇರಿ ಹಲವು ಕಾರ್ಯಕ್ರಮಗಳು ಜರುಗಿದವು.</p>.<p>ಶ್ರೀಪಾದರಾವ ಮುಧೋಳಕರ, ಅರ್ಚಕ ಕುಮಾರಭಟ್, ರಾಘವೇಂದ್ರ ಅಳವಂಡಿಕರ್, ವೇಣುಗೋಪಾಲ, ಶೇಷಗಿರಿ ಗಡಾದ್, ಜಗನ್ನಾಥ ಅಳವಂಡಿಕರ್, ಶಂಕರ ಹೊಸಳ್ಳಿ, ಬೇವಿನಾಳ ಪ್ರಲ್ಹಾದ್ ಆಚಾರ್, ಕಾಶೀನಾಥ ಭಟ್ ಸೇರಿ ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>