ಈ ಕುರಿತು ಪ್ರಜಾವಾಣಿ ಜೊತೆ ಮಾತನಾಡಿದ ಇಲ್ಲಿನ ಜೆ.ಪಿ. ಮಾರುಕಟ್ಟೆಯ ತರಕಾರಿ ವ್ಯಾಪಾರಿ ಪರಶುರಾಮ ಮೊರಾಳ ‘ಉಳ್ಳಾಗಡ್ಡಿ, ಹಸಿಮೆಣಸಿನಕಾಯಿ ಬೆಲೆ ಸ್ಥಿರವಾಗಿದೆ. ಉಳಿದ ಕೆಲ ತರಕಾರಿಗಳ ಬೆಲೆ ಏರಿಕೆಯಾಗಿದೆ. ಹೊರ ಜಿಲ್ಲೆಯಿಂದ ಮಾರುಕಟ್ಟೆಗೆ ತರಕಾರಿ ಹೆಚ್ಚು ಬರುತ್ತಿಲ್ಲ. ಮಳೆಯಾಗಿರುವ ಕಾರಣ ಸಾಕಷ್ಟು ಫಸಲು ಕೊಳೆತಿದೆ’ ಎಂದರು.