<p><strong>ಕೊಪ್ಪಳ</strong>: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಲಕ್ಷಾಂತರ ಜನರ ನಡುವೆ ಗವಿಮಠದ ಮಹಾರಥೋತ್ಸವದ ವೇಳೆ ಪಲ್ಲಕ್ಕಿ ಹೊತ್ತು ಭಕ್ತಿ ಸಮರ್ಪಿಸಿದರು.</p><p>ಈ ವೇಳೆ ಮಾತನಾಡಿ ‘ಗವಿಸಿದ್ದೇಶ್ವರ ಜಾತ್ರೆಗೆ ಬರಬೇಕು ಎನ್ನುವ ಅಪೇಕ್ಷೆಯಿತ್ತು. ಅದು ಈಗ ಈಡೇರಿದೆ. ಜಗತ್ತಿನ ಯಾವುದೇ ಪವಿತ್ರ ಸ್ಥಳದಲ್ಲಿ ಇಂತಹ ದೃಶ್ಯ ನೋಡಲು ಸಾಧ್ಯವಿಲ್ಲ. ಜಾತ್ರೆಯಲ್ಲಿ ಪಾಲ್ಗೊಂಡಿದ್ದು ಸೌಭಾಗ್ಯ’ ಎಂದರು.</p><p>‘ಪ್ರಯಾಗದಲ್ಲಿ ಕುಂಭಮೇಳ ನಡೆಯುತ್ತಿದೆ. ಇಲ್ಲಿಯೂ ಕುಂಭಮೇಳದ ರೀತಿಯಲ್ಲಿಯೇ ಜಾತ್ರೆ ನಡೆಯುತ್ತಿದೆ. ಇಲ್ಲಿನ ಜಾತ್ರೆ ಆಡಂಬರಕ್ಕೆ ಸೀಮಿತವಾಗದೆ ಜನಕಲ್ಯಾಣ ಕೆಲಸಕ್ಕೆ ಪ್ರೇರಣೆಯಾಗುತ್ತಿದೆ. ಭವಿಷ್ಯದಲ್ಲಿ ಕಿವುಡ ಹಾಗೂ ಮೂಕ ಮಕ್ಕಳಿಗೆ ಶಾಲೆ ಆರಂಭಿಸಬೇಕು ಎನ್ನುವುದು ಸ್ವಾಮೀಜಿಯ ಆಶಯವಾಗಿದೆ. ಅದು ಈಡೇರಲಿ’ ಎಂದರು.</p>.ವಿಡಿಯೊ: ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಈ ಬಾರಿ ಸಾವಯವ ಜಿಲೇಬಿ ಘಮ!.ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ 10 ಸಾವಿರ ರೊಟ್ಟಿ ರವಾನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಲಕ್ಷಾಂತರ ಜನರ ನಡುವೆ ಗವಿಮಠದ ಮಹಾರಥೋತ್ಸವದ ವೇಳೆ ಪಲ್ಲಕ್ಕಿ ಹೊತ್ತು ಭಕ್ತಿ ಸಮರ್ಪಿಸಿದರು.</p><p>ಈ ವೇಳೆ ಮಾತನಾಡಿ ‘ಗವಿಸಿದ್ದೇಶ್ವರ ಜಾತ್ರೆಗೆ ಬರಬೇಕು ಎನ್ನುವ ಅಪೇಕ್ಷೆಯಿತ್ತು. ಅದು ಈಗ ಈಡೇರಿದೆ. ಜಗತ್ತಿನ ಯಾವುದೇ ಪವಿತ್ರ ಸ್ಥಳದಲ್ಲಿ ಇಂತಹ ದೃಶ್ಯ ನೋಡಲು ಸಾಧ್ಯವಿಲ್ಲ. ಜಾತ್ರೆಯಲ್ಲಿ ಪಾಲ್ಗೊಂಡಿದ್ದು ಸೌಭಾಗ್ಯ’ ಎಂದರು.</p><p>‘ಪ್ರಯಾಗದಲ್ಲಿ ಕುಂಭಮೇಳ ನಡೆಯುತ್ತಿದೆ. ಇಲ್ಲಿಯೂ ಕುಂಭಮೇಳದ ರೀತಿಯಲ್ಲಿಯೇ ಜಾತ್ರೆ ನಡೆಯುತ್ತಿದೆ. ಇಲ್ಲಿನ ಜಾತ್ರೆ ಆಡಂಬರಕ್ಕೆ ಸೀಮಿತವಾಗದೆ ಜನಕಲ್ಯಾಣ ಕೆಲಸಕ್ಕೆ ಪ್ರೇರಣೆಯಾಗುತ್ತಿದೆ. ಭವಿಷ್ಯದಲ್ಲಿ ಕಿವುಡ ಹಾಗೂ ಮೂಕ ಮಕ್ಕಳಿಗೆ ಶಾಲೆ ಆರಂಭಿಸಬೇಕು ಎನ್ನುವುದು ಸ್ವಾಮೀಜಿಯ ಆಶಯವಾಗಿದೆ. ಅದು ಈಡೇರಲಿ’ ಎಂದರು.</p>.ವಿಡಿಯೊ: ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಈ ಬಾರಿ ಸಾವಯವ ಜಿಲೇಬಿ ಘಮ!.ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ 10 ಸಾವಿರ ರೊಟ್ಟಿ ರವಾನೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>